ಹನಗೋಡು: ಹನಗೋಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹನಗೋಡು ರೋಟರಿ ಸಂಸ್ಥೆಯ ಸಹಭಾಗಿತ್ವದಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಕಾರ್ಯಕ್ರಮ ಬುಧವಾರ ನಡೆಯಿತು.
ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯ ಕಿರಂಗೂರು ಬಸವರಾಜು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸರ್ಕಾರ ಅರಣ್ಯ ಇಲಾಖೆ ಮೂಲಕ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಪರಿಸರ ಹಾಗೂ ವನ್ಯಜೀವಿಗಳ ಬಗ್ಗೆ ಅರಿವು ಮೂಡಿಸುವ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ತಾಪಮಾನದ ವೈಪರಿತ್ಯ ವ್ಯತ್ಯಾಸದಿಂದಾಗಿ ಪರಿಸರದಲ್ಲಿ ಅಸಮತೋಲನ ಉಂಟಾಗಿದೆ. ಪರಿಸರವನ್ನು ಸಮತೋಲನದಲ್ಲಿರುವಂತೆ ಕಾಪಾಡಿಕೊಳ್ಳಲು ಜಮೀನು ಹಾಗೂ ರಸ್ತೆ ಬದಿ ಕೆರೆಕಟ್ಟೆಗಳ ಏರಿ ಬದುಗಳಲ್ಲಿ ಹೆಚ್ಚು ಹೆಚ್ಚು ಗಿಡಮರಗಳನ್ನು ಬೆಳೆಸಬೇಕು ಎಂದು ಸಲಹೆ ನೀಡಿ, ಕಾಲೇಜು ಆವರಣದಲ್ಲಿ ಸಮಿತಿ ಸದಸ್ಯರೊಂದಿಗೆ ಗಿಡ ನೆಟ್ಟು ನೀರು ಹಾಕಿದರು.
ನಂತರ ಕಾಲೇಜು ವಿದ್ಯಾರ್ಥಿಗಳು ಹನಗೋಡಿನ ಪ್ರಮುಖ ಬೀದಿಗಳಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜಾಥ ನಡೆಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ.ಬಸವರಾಜ್, ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯರಾದ ಎಚ್ ಎಸ್. ವೆಂಕಟಪ್ಪ , ಎಚ್ ಆರ್. ರಮೇಶ್,ಅಂಗಡಿ ರಾಮಚಂದ್ರು, ರಾಘವೇಂದ್ರ ಕೆ .ಎಸ್., ಸಂದೀಪ್, ರೋಟರಿ ಸಂಸ್ಥೆ ಕಾರ್ಯದರ್ಶಿ ಅಬ್ಬೂರು ಕುಮಾರ್ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.