Wednesday, April 9, 2025
Google search engine

Homeರಾಜ್ಯಲೋಕಾಯುಕ್ತರಿಂದ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಜೂ.22ರಿಂದ

ಲೋಕಾಯುಕ್ತರಿಂದ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಜೂ.22ರಿಂದ

ಬಳ್ಳಾರಿ: ಬಳ್ಳಾರಿ ವಿಭಾಗದ ಲೋಕಾಯುಕ್ತ ಪೆÇಲೀಸ್ ವಿಭಾಗದಿಂದ ಪೊಲೀಸ್ ಉಪಾಧೀಕ್ಷಕರಾದ ಕೆ.ರಾಮರಾವ್ ಮತ್ತು ಪೆÇಲೀಸ್ ನಿರೀಕ್ಷಕರಾದ ಮಹಮ್ಮದ್ ರಫಿ, ಸಂಗಮೇಶ್ ನೇತೃತ್ವದಲ್ಲಿ ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಕಂಪ್ಲಿ ಮತ್ತು ಕುರುಗೋಡು ತಾಲೂಕು ಕೇಂದ್ರಗಳಲ್ಲಿ ವಿವಿಧ ಇಲಾಖೆಗಳಿಗೆ ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದಿರುವ ಕುರಿತು ಕುಂದುಕೊರತೆಗಳ ಅಹವಾಲುಗಳ ಸ್ವೀಕಾರವನ್ನು ಜೂ.22ರಿಂದ 28ರವರೆಗೆ ನಡೆಸಲಾಗುತ್ತದೆ ಎಂದು ಲೋಕಾಯುಕ್ತ ಪೆÇಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ.22 ರಂದು ಮಾ.27ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 2ರವರೆಗೆ ಕುರುಗೋಡಿನ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ, ಜೂ.26 ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 2ರವರೆಗೆ ಕಂಪ್ಲಿ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಮತ್ತು ಜೂ.28 ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 2ರವರೆಗೆ ಬಳ್ಳಾರಿಯ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಇಲ್ಲಿ ಕುಂದು ಕೊರತೆಗಳಿರುವ ಸಾರ್ವಜನಿಕರ ದೂರುಗಳನ್ನು ಸ್ವೀಕರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular