ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ನಗರದ ಬಿಜೈ ಕೆಎಸ್ಸಾರ್ಟಿಸಿ ಬಳಿ ಕಾರ್ಯಾಚರಿಸುತ್ತಿದ್ದ ಕಲರ್ಸ್ ಯುನಿಸೆಕ್ಸ್ ಸೆಲೂನ್ಗೆ ಗುರುವಾರ ನುಗ್ಗಿ ದಾಂಧಲೆಗೈದ ರಾಮಸೇನೆಯ 14 ಮಂದಿ ಕಾರ್ಯಕರ್ತರಿಗೆ ನ್ಯಾಯಾಲಯ ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಯುನಿಸೆಕ್ಸ್ ಸೆಲೂನ್ನಲ್ಲಿ ಅನೈತಿಕ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ಗುರುವಾರ ಮಧ್ಯಾಹ್ನ ವೇಳೆ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ನೇತೃತ್ವದ ಕಾರ್ಯತ್ರರು ನುಗ್ಗಿ ದಾಂಧಲೆಗೈದು ಸೆಲೂನ್ನಲ್ಲಿದ್ದ ಪೀಠೋಪಕರಣಗಳನ್ನು ಹಾನಿಗೈದಿದ್ದರು. ಅಲ್ಲದೆ ಸೆಲೂನ್ನಲ್ಲಿದ್ದ ಸಿಬ್ಬಂದಿಗೆ ನಿಂದಿಸಿ ಹಲ್ಲೆ ಮಾಡಿ ಪರಾರಿಯಾಗಿದ್ದರು.