Friday, April 18, 2025
Google search engine

Homeರಾಜ್ಯದೇವರ ಕೊಂಡದ ಬೆಂಕಿ ತಗುಲಿ 30 ಮಂದಿಗೆ ಗಾಯ: ಗಾಯಾಳುಗಳಿಗೆ ಮುಂದುವರಿದ ಚಿಕಿತ್ಸೆ

ದೇವರ ಕೊಂಡದ ಬೆಂಕಿ ತಗುಲಿ 30 ಮಂದಿಗೆ ಗಾಯ: ಗಾಯಾಳುಗಳಿಗೆ ಮುಂದುವರಿದ ಚಿಕಿತ್ಸೆ

ತುಮಕೂರು: ಜಾತ್ರಾ ಮಹೋತ್ಸವದಲ್ಲಿ ದೇವರ ಕೊಂಡ ಹಾಯುವಾಗ ನೂಕು ನುಗ್ಗಲಿನಿಂದಾಗಿ 30 ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ, ತುರುವೇಕೆರೆ ತಾಲ್ಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ.

ಬರೋಬ್ಬರಿ 35 ವರ್ಷಗಳ ಬಳಿಕ ನಿನ್ನೆ ನಡೆದ ರಾಮಲಿಂಗೇಶ್ವರ ಮತ್ತು ಚೌಡೇಶ್ವರಿ ಜಾತ್ರಾ ಮಹೋತ್ಸವದಲ್ಲಿ ಈ ದುರಂತ ಸಂಭವಿಸಿದೆ.

ಸಾವಿರಾರು ಮಂದಿ ಜನರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ದೇವರ ಕೊಂಡ ಹಾಯುವಾಗ ನೂಕು ನುಗ್ಗಲು ಏರ್ಪಟ್ಟಿದೆ. ಈ ವೇಳೆ 30 ಕ್ಕೂ ಹೆಚ್ಚು ಮಂಡಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನ ಕೂಡಲೇ ತುರುವೇಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

RELATED ARTICLES
- Advertisment -
Google search engine

Most Popular