Wednesday, March 25, 2026
Google search engine

Homeರಾಜಕೀಯರಾಹುಕಾಲ ನೋಡಿ ಬಜೆಟ್ ಸಮಯ ನಿಗದಿ ಒಪ್ಪಿಗೆ : ರಾಹುಕಾಲ ಚರ್ಚೆ ವಿಚಾರ ವಿಧಾನಸಭೆಯಲ್ಲಿ ಸಿಎಂ...

ರಾಹುಕಾಲ ನೋಡಿ ಬಜೆಟ್ ಸಮಯ ನಿಗದಿ ಒಪ್ಪಿಗೆ : ರಾಹುಕಾಲ ಚರ್ಚೆ ವಿಚಾರ ವಿಧಾನಸಭೆಯಲ್ಲಿ ಸಿಎಂ ಸ್ಪಷ್ಟನೆ

ಬೆಂಗಳೂರು : ರಾಹುಕಾಲವನ್ನು ತಪ್ಪಿಸುವುದಕ್ಕಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗ್ಗೆ 10.15ಕ್ಕೆ ಬಜೆಟ್ ಮಂಡನೆ ಸಮಯ ನಿಗದಿಪಡಿಸಿದ್ದು ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೇಳಿದ್ದರು. ಇದೀಗ ವಿಧಾನಸಭೆಯಲ್ಲಿ ಕೂಡ ಆ ವಿಚಾರ ಚರ್ಚೆಯಾಗಿದೆ. ರಾಹುಕಾಲ ತಪ್ಪಿಸುವುದಕ್ಕಾಗಿಯೇ ಆ ಸಮಯ ನಿಗದಿ ಮಾಡಿದ್ದು ನಿಜ ಎಂದು ಖುದ್ದು ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ! ಅಲ್ಲದೆ, ಅದಕ್ಕೆ ಕಾರಣವನ್ನು ಕೂಡ ಕೊಟ್ಟಿದ್ದಾರೆ.

ಬಜೆಟ್ ಮೇಲಿನ ಚರ್ಚೆಗೆ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಬುಧವಾರ ಉತ್ತರ ನೀಡಿದರು. ಇದೇ ವೇಳೆ, ಪ್ರತಿಪಕ್ಷ ನಾಯಕ ಆರ್ ಅಶೋಕ್, ರಾಹುಕಾಲ ನೋಡಿಕೊಂಡು ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದ ಬಗ್ಗೆ ಉಲ್ಲೇಖಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಹೌದು, ‘ರಾಹುಕಾಲ ನೋಡಿಕೊಂಡು ಬಜೆಟ್ ಮಂಡಿಸಿದ್ದಾರೆ’ ಎಂಬುದು ನಿಜ ಎಂದರು.

ರಾಹುಕಾಲ ನೋಡಿಕೊಂಡು ಬಜೆಟ್ ಮಂಡಿಸಿದ್ದಾರೆ ಎಂಬುದು ನಿಜ. ಮನೆಯವರು, ಅಧಿಕಾರಿಗಳ ಮಾತು ಕೇಳಬೇಕು ಅಲ್ಲವೇ? ನಿಮ್ಮಂಥವರ ಮಾತು ಕೇಳಬೇಕು ಅಲ್ಲವೇ ಎಂದು ಸಿದ್ದರಾಮಯ್ಯ ಹೇಳಿದರು. ಇದೇ ವೇಳೆ ಮಧ್ಯ ಪ್ರವೇಶ ಮಾಡಿದ ಅಶೋಕ್, ಅವತ್ತಿನ ಪರಿಸ್ಥಿತಿ ಬೇರೆ ಇತ್ತು. ಇಂದಿನ ಪರಿಸ್ಥಿತಿ ಬೇರೆ ಇದೆ. ಮುಂದೆಯೂ ನೀವು ಬಜೆಟ್ ಮಂಡನೆ ಮಾಡಬೇಕು ಅಲ್ಲವೇ? ಅದಕ್ಕಾಗಿ ಈ ಬಾರಿ ಕಾಲ ನೋಡಿದ್ದೀರಿ ಎಂದರು.

ಅಶೋಕ್ ಮಾತಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ರಾಹುಕಾಲ, ಯಮಗಂಡಕಾಲ ಮತ್ತು ಗುಳಿಕಕಾಲ ಇದನ್ನೆಲ್ಲಾ ನಾನು ನಂಬಲ್ಲ. ಅಧಿಕಾರಿಗಳ ಹಾಗೂ ಮನೆಯವರ ಮಾತು ಕೇಳಿ ಸಮಯ ನೋಡಿದ್ದೇನೆ ಅಷ್ಟೇ. ನಾನು ಶಿವರಾತ್ರಿ ಹಾಗೂ ಯುಗಾದಿಯಲ್ಲಿ ಮಾಂಸ ತಿಂದಿದ್ದೇನೆ. ನೀವು ತಿಂದಿದ್ದೀರಾ ಎಂದು ಪ್ರಶ್ನಿಸಿದರು.

ಸಾಮಾನ್ಯವಾಗಿ ಬಜೆಟ್ ಮಂಡನೆ ಬೆಳಗ್ಗೆ 10 ಗಂಟೆ ಅಥವಾ 11 ಗಂಟೆಗೆ ಮಾಡುತ್ತಾರೆ. ಆದರೆ ಈ ಬಾರಿ 10.15ಕ್ಕೆ ಸಿದ್ದರಾಮಯ್ಯ ಬಜೆಟ್ ಮಂಡನೆ ಸಮಯ ನಿಗದಿ ಮಾಡಿಕೊಂಡಿದ್ದಾರೆ. ಏಕೆಂದು ಕುತೂಹಲದಿಂದ ವಿಚಾರಿಸಿದಾಗ ಗೊತ್ತಾಗಿದ್ದು, ಬೆಳಗ್ಗೆ 10. 30 ರಿಂದ ರಾಹು ಕಾಲ ಇದೆ ಎಂಬುದು. ಬೆಳಗ್ಗೆ 7.30 ಗಂಟೆ ಯಿಂದ 9 ಗಂಟೆಯವರೆಗೂ ಗುಳಿಕಾಲ. ಮೂಢನಂಬಿಕೆ ಎಂಬ ಹ್ಯಾಷ್​ಟ್ಯಾಗ್​ನೊಂದಿಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಬಜೆಟ್ ದಿನವೇ ಫೇಸ್​​ಬುಕ್​​ನಲ್ಲಿ ಪೋಸ್ಟ್ ಮಾಡಿದ್ದರು.

RELATED ARTICLES
- Advertisment -
Google search engine

Most Popular