ಮೂಲ್ಕಿ ತಾಲೂಕಿನ ಪಂಚಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿಯ ಸಭೆ ಆಲ್ವಿನ್ ಕ್ಲೆಮೆಂಟ್ ಕುಟಿನ್ಹ ಅವರ ಅಧ್ಯಕ್ಷತೆಯಲ್ಲಿ ಕಚೇರಿಯಲ್ಲಿ ಸೋಮವಾರ ನಡೆಯಿತು.
ಈ ಸಭೆಯಲ್ಲಿ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಬಿ ಹಾಗೂ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಪಂಚ ಗ್ಯಾರಂಟಿ ಅನುಷ್ಟಾನ ಸಮಿತಿಯ ಸದಸ್ಯರು ಭಾಗವಹಿಸಿದರು.
ವಿವಿಧ ಇಲಾಖೆಯ ಪ್ರಗತಿಯನ್ನು ಪರಿಶೀಲಿಸಿ ಅಧ್ಯಕ್ಷರು ಹಾಗೂ ಸದಸ್ಯರು ಹಲವು ಸಲಹೆಗಳನ್ನು ನೀಡಿದರು. ಮುಲ್ಕಿ ತಾಲೂಕಿನ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಅವರು ಮಾರ್ಚ್ 31 ರಂದು ನಿವೃತ್ತಿ ಹೊಂದಲಿದ್ದು, ಅವರಿಗೆ ಪಂಚಗ್ಯಾರಂಟಿ ಅನುಷ್ಟಾನದ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು.
ಪಂಚ ಗ್ಯಾರಂಟಿ ಅನುಷ್ಟಾನದ ಸಮಿತಿಯ ಸದಸ್ಯ ಜನಾರ್ಧನ್ ವಂದಿಸಿದರು.



