Friday, April 10, 2026
Google search engine

Homeರಾಜ್ಯಟ್ರೆಕ್ಕರ್‌ಗಳ ಸುರಕ್ಷತೆಗೆ ತಂತ್ರಜ್ಞಾನ ಬಳಕೆ : ಸಚಿವ ಈಶ್ವರ ಬಿ ಖಂಡ್ರೆ ಸೂಚನೆ

ಟ್ರೆಕ್ಕರ್‌ಗಳ ಸುರಕ್ಷತೆಗೆ ತಂತ್ರಜ್ಞಾನ ಬಳಕೆ : ಸಚಿವ ಈಶ್ವರ ಬಿ ಖಂಡ್ರೆ ಸೂಚನೆ

ಬೆಂಗಳೂರು : ಟ್ರೆಕ್ಕಿಂಗ್‌ಗೆ ತೆರಳುವವರ ಸುರಕ್ಷತೆಗಾಗಿ ತಂತ್ರಜ್ಞಾನ ಆಧಾರಿತ ಕ್ರಮಗಳನ್ನು ಜಾರಿಗೆ ತರಬೇಕೆಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ.ಬಿ.ಖಂಡ್ರೆಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ತಡಿಯಾಂಡಮೋಲ್ ಚಾರಣದ ವೇಳೆ ಕೇರಳದ ಶರಣ್ಯ ಎಂಬ ಮಹಿಳೆ 3 ದಿನ ಕಾಡಿನಲ್ಲಿ ದಿನ ಕಳೆದಿರುವುದು ಹಾಗೂ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರ ಜಲಪಾತದ ಬಳಿ ಬಾಲಕಿ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಖಂಡ್ರೆ ಈ ಲಿಖಿತ ಸೂಚನೆ ಕೊಟ್ಟಿದ್ದಾರೆ.

ಅರಣ್ಯ ಇಲಾಖೆ ಈಗಾಗಲೇ ಅಭಿವೃದ್ಧಿಪಡಿಸಿರುವ ಇ-ಗಸ್ತು, ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಬಳಕೆ ಮಾಡುವ ಆ್ಯಪ್ ಮಾದರಿಯಲ್ಲಿಯೇ ಚಾರಣ ಅವಧಿಯಲ್ಲಿ ತಾತ್ಕಾಲಿಕವಾಗಿ ಚಾರಣಿಗರ ಮೊಬೈಲ್‍ನಲ್ಲಿ ಆ್ಯಪ್ ಅಳವಡಿಸಿದರೆ, ಯಾರೇ ದಾರಿ ತಪ್ಪಿಸಿಕೊಂಡರೂ ಅವರ ಶೋಧಕಾರ್ಯ ಸುಲಭವಾಗುತ್ತದೆ. ಹೀಗಾಗಿ ಆ್ಯಪ್ ಅಭಿವೃದ್ಧಿಗೆ ಕ್ರಮ ವಹಿಸುವಂತೆ ಮತ್ತು ಚಾರಣಿಗರಿಗೆ ಗುಂಪು ವಿಮೆ ಮಾಡಿಸುವಂತೆ ಸಚಿವರು ನಿರ್ದೇಶಿಸಿದ್ದು, ಇದರೊಂದಿಗೆ ಚಾರಣಿಗರಿಗೆ ಮಾರ್ಗದರ್ಶನ ಮಾಡುವ ನೇಚರ್ ಗೈಡ್‍ಗಳಿಗೆ ಕಡ್ಡಾಯವಾಗಿ ವೈರ್‍ಲೆಸ್ ಸೆಟ್ ನೀಡಬೇಕು.

ಟ್ರೆಕ್ಕರ್‌ಗಳ ಸುರಕ್ಷತೆಯಲ್ಲಿ ಗೈಡ್‌ಗಳು, ಟ್ರೆಕ್ಕರ್‌ಗಳು ಮತ್ತು ಅರಣ್ಯ ಇಲಾಖೆ ಎಲ್ಲರೂ ಜವಾಬ್ದಾರರಾಗಿರಬೇಕು. ಯಾವುದೇ ಅನಾಹುತ ಸಂಭವಿಸಿದರೆ ಗೈಡ್‌ಗಳನ್ನೂ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular