ಮೈಸೂರು : ಸಿದ್ದರಾಮಯ್ಯ ಏಪ್ರಿಲ್ 20 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು 11.25ಕ್ಕೆ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಕಲಾಮಂದಿರದಲ್ಲಿ ಆಯೋಜಿಸಿರುವ ಬಸವ ಜಯಂತಿ-2026 ಕಾರ್ಯಕ್ರಮವನ್ನ ಉದ್ಘಾಟಿಸಿ 2026ರ ಬಸವಶ್ರೀ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ನಂತರ ಮಧ್ಯಾಹ್ನ 2 ಗಂಟೆಗೆ ಹುಣಸೂರಿಗೆ ತೆರಳಿ ಮಾದಳ್ಳಿಯ ಉಕ್ಕಿನಕಂತೆ ಮಠದಲ್ಲಿ ನಡೆಯುವ ಬಸವ ಜಯಂತಿ ಕಾರ್ಯಕ್ರಮ ಮತ್ತು ಬಸವ ಮಹಾದ್ವಾರ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 3.15ಕ್ಕೆ ತಾಲ್ಲೂಕು ಕುರುಬರ ಅಭಿವೃದ್ದಿ ಸಮಿತಿ ವತಿಯಿಂದ ಆಯೋಜಿಸಿರುವ ಶ್ರೀ ಗಣಪತಿ ದೇವಸ್ಥಾನ ಉದ್ಗಾಟನೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ.
ಸಂಜೆ 4.30ಕ್ಕೆ ಹುಣಸೂರಿನಲ್ಲಿ ಗ್ರಾಮದೇವತೆ ಮುತ್ತುಮಾರಮ್ಮ ದೇವಸ್ಥಾನದ 23ನೇ ವರ್ಷದ ವಾರ್ಷಿಕೋತ್ಸವ ಹಾಗೂ ಬೆಳ್ಳಿರಥ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4 ಗಂಟೆಗೆ ಮೈಸೂರಿಗೆ ವಾಪಸ್ ಆಗಿ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.



