ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ ಸುರೇಶ್ ರಿಂದ ಹೈಕಮಾಂಡ್ ನಾಯಕರ ಭೇಟಿ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಗೃಹ ಸಚಿವ ಪರಮೇಶ್ವರ್, ಮಾಡೋದೇ ರಾಜಕೀಯ. ಅದರಲ್ಲಿ ಬೆಳವಣಿಗೆ ಏನಿದೆ? ಅದಕ್ಕೆ ಅಲ್ವ ರಾಜಕಾರಣವೆಂದು ಹೇಳೋದು .ರಾಜಕಾರಣ ಅನ್ನೋ ಪದದಲ್ಲೇ ಅದೆಲ್ಲವೂ ಬಂದು ಬಿಡುತ್ತೆ ಪ್ರತ್ಯೇಕವಾಗಿ ರಾಜಕೀಯ ಅನ್ನೋದು ಏನು ಇಲ್ವಲ್ಲ ಎಂದರು.
ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಪರಮೇಶ್ವರ್, ಎಫ್ಐಆರ್ ಆಧಾರದಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟಕ್ಕೆ ಅವಕಾಶ ಇಲ್ಲ ಒಂದು ವೇಳೆ ಕಾಳಸಂತೆಯಲ್ಲಿ ಟಿಕೆಟ್ ಮಾರಿ ಸಿಕ್ಕಿಬಿದ್ದರೆ ಕ್ರಮ ಕೈಗೊಳ್ಳಲಾಗುತ್ತದೆ. ಐಪಿಎಲ್ ಟಿಕೆಟ್ ಮಾರಾಟಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಆನ್ ಲೈನ್ ನಲ್ಲಿ ಟಿಕೆಟ್ ಮಾರುವುದು ಸಂಬಂಧಿಸಿದ ಸಂಸ್ಥೆಗೆ ಬಿಟ್ಟಿದ್ದು ಎಂದರು.



