Thursday, May 14, 2026
Google search engine

Homeದೇಶಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಭಾರತ ಭೇಟಿ: ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಚರ್ಚೆ

ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಭಾರತ ಭೇಟಿ: ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಚರ್ಚೆ

ನವದೆಹಲಿ : ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗಿರುವ ಬೆನ್ನಲ್ಲೇ, ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು ಮೂರು ದಿನಗಳ ಅಧಿಕೃತ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ.

ಮೇ 14ರಿಂದ ಆರಂಭವಾಗಲಿರುವ ಬ್ರಿಕ್ಸ್ ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರ ಎರಡು ದಿನಗಳ ಸಭೆಯಲ್ಲಿ ಭಾಗವಹಿಸುವುದು ಇವರ ಮುಖ್ಯ ಉದ್ದೇಶವಾಗಿದೆ. ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಅರಾಘ್ಚಿ ಅವರು ಪಶ್ಚಿಮ ಏಷ್ಯಾದ ಬಿಕ್ಕಟ್ಟು ಮತ್ತು ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಿದ್ದಾರೆ. ಗುರುವಾರ ಅರಾಘ್ಚಿ ಸೇರಿದಂತೆ ಬ್ರಿಕ್ಸ್ ರಾಷ್ಟ್ರಗಳ ವಿದೇಶಾಂಗ ಸಚಿವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.

ಆಯಕಟ್ಟಿನ ಪ್ರದೇಶವಾದ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸುರಕ್ಷಿತ ಸಂಚಾರದ ಬಗ್ಗೆ ಭಾರತ ಒತ್ತು ನೀಡುವ ಸಾಧ್ಯತೆಯಿದೆ. ಯುದ್ಧದ ಸನ್ನಿವೇಶದಿಂದ ಜಾಗತಿಕ ಇಂಧನ ಪೂರೈಕೆ ಸರಪಳಿಯ ಮೇಲಾಗುವ ಪರಿಣಾಮಗಳ ಬಗ್ಗೆ ಬ್ರಿಕ್ಸ್ ಸಭೆಯಲ್ಲಿ ಚರ್ಚೆಯಾಗಲಿದೆ.

ಇಸ್ರೇಲ್ ವಿರುದ್ಧ ಅರಾಘ್ಚಿ ಕಿಡಿ

ಭಾರತಕ್ಕೆ ಆಗಮಿಸಿದ ಸಂದರ್ಭದಲ್ಲಿ ಅರಾಘ್ಚಿ ಅವರು ಎಕ್ಸ್ (X) ಮೂಲಕ ಇಸ್ರೇಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಇರಾನ್‌ನೊಂದಿಗೆ ಹಗೆತನ ಸಾಧಿಸುವುದು ಮೂರ್ಖತನದ ಪರಮಾವಧಿ. ಇಸ್ರೇಲ್‌ನೊಂದಿಗೆ ಕೈಜೋಡಿಸಿ ಇರಾನ್ ವಿರುದ್ಧ ಸಂಚು ರೂಪಿಸುವವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು,” ಎಂದು ಅವರು ಎಚ್ಚರಿಸಿದ್ದಾರೆ.

ಭಾರತವು ಈ ವರ್ಷ ‘ಬ್ರಿಕ್ಸ್’ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದು, ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ವಾರ್ಷಿಕ ಶೃಂಗಸಭೆಯ ಪೂರ್ವಸಿದ್ಧತೆಯಾಗಿ ಈ ಸಭೆಯನ್ನು ಆಯೋಜಿಸಿದೆ. (ಏಜೆನ್ಸಿಸ್)

RELATED ARTICLES
- Advertisment -
Google search engine

Most Popular