Monday, June 29, 2026
Google search engine

Homeರಾಜಕೀಯಬಿಡದಿ ಟೌನ್‌ಶಿಪ್ ಕೈಬಿಡಿ, ರೈತರಿಗೆ ನೋವು ಬೇಡ: ಸೋಮಣ್ಣ

ಬಿಡದಿ ಟೌನ್‌ಶಿಪ್ ಕೈಬಿಡಿ, ರೈತರಿಗೆ ನೋವು ಬೇಡ: ಸೋಮಣ್ಣ

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ರೈತರ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಬದಲು, ಯೋಜನೆಯನ್ನು ಬೇರೆ ಸ್ಥಳಕ್ಕೆ ಸ್ಥಳಾಂತರಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಸಲಹೆ ನೀಡಿದ್ದಾರೆ. ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಅಭಿವೃದ್ಧಿ ಯೋಜನೆ ರೈತರಿಗೆ ತೊಂದರೆ ಉಂಟುಮಾಡುವಂತಿರಬಾರದು ಎಂದು ಹೇಳಿದರು.

ಬಿಡದಿ ಟೌನ್‌ಶಿಪ್ ವಿಚಾರವಾಗಿ ಈಗಾಗಲೇ ತಮ್ಮ ಅಭಿಪ್ರಾಯವನ್ನು ಹಲವು ಬಾರಿ ವ್ಯಕ್ತಪಡಿಸಿದ್ದು, ಭಾನುವಾರ ಸಿಎಂ ಡಿ.ಕೆ. ಶಿವಕುಮಾರ್ ಅವರ ಸಹೋದರ ಡಿ.ಕೆ. ಸುರೇಶ್ ಅವರೊಂದಿಗೂ ದೂರವಾಣಿ ಮೂಲಕ ಚರ್ಚೆ ನಡೆಸಿರುವುದಾಗಿ ತಿಳಿಸಿದರು. ಮುಖ್ಯಮಂತ್ರಿ ಸ್ಥಾನಕ್ಕೆ ಬಂದಿರುವ ಡಿ.ಕೆ. ಶಿವಕುಮಾರ್ ಹೊಸ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳದೇ ರಾಜ್ಯದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಅವರು ಸಲಹೆ ನೀಡಿದರು.

ಹಿಂದೆ ಮುಖ್ಯಮಂತ್ರಿ ಆಗಿದ್ದ ವೇಳೆ ಹೆಚ್.ಡಿ. ಕುಮಾರಸ್ವಾಮಿ ರೈತರ ವಿರೋಧದ ಹಿನ್ನೆಲೆಯಲ್ಲಿ ಇದೇ ಯೋಜನೆಯನ್ನು ಕೈಬಿಟ್ಟಿದ್ದರು ಎಂದು ನೆನಪಿಸಿದ ಸೋಮಣ್ಣ, ಈಗಲೂ ರೈತರ ಭಾವನೆಗೆ ಗೌರವ ನೀಡಬೇಕು ಎಂದರು. ಬಿಡದಿ ಭಾಗದ ಬೈರಮಂಗಲ ಕೆರೆಯ ಶುದ್ಧೀಕರಣಕ್ಕೆ ಸರ್ಕಾರ ಮೊದಲ ಆದ್ಯತೆ ನೀಡಬೇಕು. ಹಠಮಾರಿ ಧೋರಣೆ ಬಿಟ್ಟು ವಿವಾದಿತ ಯೋಜನೆಯನ್ನು ಕೈಬಿಟ್ಟು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯತ್ತ ಸರ್ಕಾರ ಗಮನ ಹರಿಸಬೇಕು ಎಂದು ಸಿಎಂಗೆ ಮನವಿ ಮಾಡಿದರು.

RELATED ARTICLES
- Advertisment -
Google search engine

Most Popular