ಮಂಡ್ಯ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನನ್ನ ಬಳಿ ಸಹಾಯ ಪಡೆದಿದ್ದಾರೆ. ಬೇಕಾದರೆ ಈ ವಿಷಯದ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಸವಾಲು ಹಾಕಿದರು. ಮಂಡ್ಯ ಜಿಲ್ಲೆಯ ಗೆಜ್ಜಲಗೆರೆಯಲ್ಲಿ ಮಾತನಾಡಿದ ಅವರು, ಹೆಚ್ಡಿಕೆ ಸೇರಿದಂತೆ ಅನೇಕ ನಾಯಕರು ನನ್ನ ಸಹಾಯ ಪಡೆದಿದ್ದಾರೆ ಎಂದರು. ಕೆಲವರು ರಾಜಕೀಯ ಉದ್ದೇಶದಿಂದ ಪ್ರಚೋದನಕಾರಿ ಭಾಷಣ ಮಾಡುತ್ತಾರೆ. ಪ್ರತಿಭಟನಾ ಸ್ಥಳಕ್ಕೆ ಬರಬೇಕೆಂದಿದ್ದರೂ, ನನ್ನನ್ನು ತಪ್ಪಾಗಿ ಬಿಂಬಿಸಿದ್ದರಿಂದ ಬರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.



