Monday, April 21, 2025
Google search engine

Homeರಾಜ್ಯತಮಿಳುನಾಡಿಗೆ ಹೆಚ್ಚಿನ ನೀರು ಬಿಡುಗಡೆ: ಮದ್ದೂರಿನಲ್ಲಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

ತಮಿಳುನಾಡಿಗೆ ಹೆಚ್ಚಿನ ನೀರು ಬಿಡುಗಡೆ: ಮದ್ದೂರಿನಲ್ಲಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

ಮಂಡ್ಯ: ಕೆಆರ್ ಎಸ್ ಡ್ಯಾಂ ನಿಂದ ತಮಿಳುನಾಡಿಗೆ ಹೆಚ್ಚಿನ ನೀರು ಬಿಡುಗಡೆ ಹಿನ್ನಲೆ ನೀರಿಗಾಗಿ ಮದ್ದೂರಿನ ಟಿಬಿ ವೃತ್ತದಲ್ಲಿ ಬೆಂ-ಮೈ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರ ಹಾಗೂ ಕಾವೇರಿ ನೀರಾವರಿ ನಿಗಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಲ್ಕು ಅಣೆಕಟ್ಟೆಗಳಿಂದ ಈಗಾಗಲೇ 80,000 ಕ್ಯೂಸ್ ನೀರು ತಮಿಳುನಾಡಿಗೆ ಹರಿದು ಹೋಗಿದೆ. ತಮಿಳುನಾಡಿಗೆ ಸೇರಬೇಕಾದ ನೀರು ಈಗಾಗಲೇ ಸೇರಿದರು ಕೂಡ ಸುಪ್ರೀಂಕೋರ್ಟ್ ಆಜ್ಞೆಯಂತೆ ಮತ್ತೆ 11 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಬಿಟ್ಟಿರುವುದು ಸರಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಬೆಳೆಗಳಿಗೆ ನೀರಿಲ್ಲದೆ ಒಣಗುತ್ತಿವೆ. ಕಾಲುವೆಗಳಿಗೆ ಕೇವಲ 2 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಟ್ಟಿದ್ದು, ನೀರು ಇನ್ನೂ ನಾಲೆಗಳಿಗೆ ತಲುಪಿಲ್ಲ. ಈ ಕೂಡಲೇ ತಮಿಳುನಾಡಿಗೆ ನೀರನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಉಗ್ರಹೋರಾಟ ಮಾಡುವುದಾಗಿ ರೈತರು ಎಚ್ಚರಿಕೆ ನೀಡಿದರು.

RELATED ARTICLES
- Advertisment -
Google search engine

Most Popular