Saturday, April 19, 2025
Google search engine

Homeರಾಜ್ಯಬಾಗಲಕೋಟೆ: ಶಿವಾಜಿ ಮೂರ್ತಿ ತೆರವು ಖಂಡಿಸಿ‌ ಇಂದು ಸ್ವಯಂ ಘೋಷಿತ ಬಂದ್

ಬಾಗಲಕೋಟೆ: ಶಿವಾಜಿ ಮೂರ್ತಿ ತೆರವು ಖಂಡಿಸಿ‌ ಇಂದು ಸ್ವಯಂ ಘೋಷಿತ ಬಂದ್

ಬಾಗಲಕೋಟೆ : ಶಿವಾಜಿ ಮೂರ್ತಿ ತೆರವು ಖಂಡಿಸಿ‌ ಇಂದು ಬಾಗಲಕೋಟೆ ಸ್ವಯಂ ಘೋಷಿತ ಬಂದ್ ಗೆ ಕರೆ ನೀಡಿರುವ ಹಿನ್ನಲೆ ನಗರದಾದ್ಯಂತ ವ್ಯಾಪಾರ ವಹಿವಾಟು ಬಂದ್ ಆಗಿದೆ.

ಬಂದ್ ಹಿನ್ನೆಲೆ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ಅಡತ ಮಾರ್ಕೆಟ್ ಬಜಾರ್ ಬಿಕೋ ಎನ್ನುತ್ತಿದೆ.

ಜಿಲ್ಲಾ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಶಿವಾಜಿ ಮೂರ್ತಿ ಮರು ಪ್ರತಿಷ್ಠಾಪನೆಗೆ ಆಗ್ರಹಿಸಿ ಬಾಗಲಕೋಟೆ ಬಂದ್’ಗೆ ಕರೆ ನೀಡಿದ್ದಾರೆ.  ಬೆಳಿಗ್ಗೆ ೧೦:೩೦ಕ್ಕೆ ನಗರದಾದ್ಯಂತ ನಡೆಯಲಿರೋ ಬೃಹತ್ ಮೌನ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದು, ಬಳಿಕ ಬಸವೇಶ್ವರ ವೃತ್ತದ ಬಳಿ ಪ್ರತಿಭಟನಾತ್ಮಕ ಸಭೆ ನಡೆಯಲಿದೆ.

ಮಾಜಿ ಸಚಿವ ಗೋವಿಂದ ಕಾರಜೋಳ ಮತ್ತು ಮಾಜಿ ಶಾಸಕ ವೀರಣ್ಣ ಚರಂತಿಮಠ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.  ಬಳಿಕ ಜಿಲ್ಲಾ ಕೇಂದ್ರದಲ್ಲಿ ಡಿಸಿಗೆ ಹಾಗೂ ಜಿಲ್ಲೆಯ ೯ ತಾಲೂಕು ಕೇಂದ್ರಗಳಲ್ಲೂ ತಹಶೀಲ್ದಾರಗೆ ಮನವಿ ಸಲ್ಲಿಲಾಗುತ್ತದೆ.

ಎಂದಿನಂತೆ ಖಾಸಗಿ ವಾಹನಗಳ ಓಡಾಟ ಎಂದಿನಂತಿದ್ದು, ಎಲ್ಲೆಲ್ಲೂ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

RELATED ARTICLES
- Advertisment -
Google search engine

Most Popular