Saturday, April 19, 2025
Google search engine

Homeರಾಜ್ಯಸುದ್ದಿಜಾಲಇಸ್ರೋ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಇಸ್ರೋ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಇಸ್ರೋದ ಮಹತ್ವಾಕಾಂಕ್ಷಿ ಚಂದ್ರಯಾನ-೩ ಯೋಜನೆ ಯಶಸ್ವಿ ಹಿನ್ನೆಲೆ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಇಸ್ರೋ ವಿಜ್ಞಾನಿಗಳ ಈ ಸಾಧನೆ ಇಡೀ ದೇಶಕ್ಕೆ ಹೆಮ್ಮೆಯ ವಿಚಾರ. ನಮ್ಮ ಇಸ್ರೋ ವಿಜ್ಞಾನಿಗಳು ಹೊಸ ಇತಿಹಾಸ ಬರೆದಿದ್ದಾರೆ. ಇಸ್ರೋ ಅಧ್ಯಕ್ಷ ಸೋಮನಾಥ್ ಮತ್ತವರ ತಂಡಕ್ಕೆ ಅಭಿನಂದಿಸಿದ್ದೇನೆ. ವಿಧಾನಸೌಧದ ಬ್ಯಾಂಕ್ವೇಟ್ ಹಾಲ್‌ನಲ್ಲಿ ವಿಜ್ಞಾನಿಗಳ ತಂಡಕ್ಕೆ ರಾಜ್ಯ ಸರ್ಕಾರದವತಿಯಿಂದ ಸನ್ಮಾನಿಸಲು ನಿರ್ಧರಿಸಲಾಗಿದೆ ಎಂದರು.

ಇಸ್ರೋದ ಮಹತ್ವಾಕಾಂಕ್ಷಿ ಚಂದ್ರಯಾನ-೩ ಯೋಜನೆ ಯಶಸ್ವಿ ಹಿನ್ನೆಲೆ ಇಸ್ರೋ ವಿಜ್ಞಾನಿಗಳಿಗೆ ರಾಜ್ಯದ ಪರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದಿಸಿದರು. ಇಸ್ರೋ ವಿಜ್ಞಾನಿಗಳು ಇತಿಹಾಸದ ಪುಟ ಸೇರುವ ಸಾಧನೆ ಮಾಡಿದ್ದಾರೆ. ಇಡೀ ಪ್ರಪಂಚ ಭಾರತೀಯ ವಿಜ್ಞಾನಿಗಳನ್ನು ಹಾಡಿ ಹೊಗಳುತ್ತಿದ್ದಾರೆ. ದೂರದೃಷ್ಟಿ ಇಟ್ಟುಕೊಂಡು ನೆಹರು ಇಸ್ರೋ ಸಂಸ್ಥೆ ಸ್ಥಾಪನೆ ಮಾಡಿದ್ದರು. ಇಸ್ರೋ ಅಧ್ಯಕ್ಷ ಸೋಮನಾಥ ತಂಡಕ್ಕೆ ಅಭಿನಂದನೆಗಳು ಎಂದು ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

ಚಂದ್ರಯಾನ-೩ ಯಶಸ್ವಿಯಾದ ಹಿನ್ನೆಲೆ ಸಿಹಿ ವಿತರಿಸಿ ಸನ್ಮಾನಿಸಿ ಇಸ್ರೋ ಅಧ್ಯಕ್ಷ ಸೋಮನಾಥ, ವಿಜ್ಞಾನಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular