Sunday, April 20, 2025
Google search engine

Homeರಾಜ್ಯಮಂಗಳೂರು: ಬಸ್ ಬಾಗಿಲಿನಿಂದ ಬಿದ್ದು ಕಂಡಕ್ಟರ್ ಸಾವು

ಮಂಗಳೂರು: ಬಸ್ ಬಾಗಿಲಿನಿಂದ ಬಿದ್ದು ಕಂಡಕ್ಟರ್ ಸಾವು

ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ನಗರದ ಸಿಟಿ ಬಸ್ ನ ಕಂಡಕ್ಟರ್ ಬಸ್ಸಿನ ಎದುರು ಬಾಗಿಲಿನಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

 ಸಿಟಿ ಬಸ್ ಪದುವದಿಂದ ಶಿವಭಾಗ್ ಕಡೆ ಹೋಗುವ ವೇಳೆ ನಂತೂರು ವೃತ್ತ ಬಳಿ ಈ ಘಟನೆ ನಡೆದಿದೆ. ಬಸ್ಸಿನ ಎದುರು ಬಾಗಿಲ ಬಳಿ ನಿಂತಿದ್ದ ಈರಯ್ಯ( 23) ಎಂಬುವವರು ಆಯತಪ್ಪಿ ಬಿದ್ದಿದ್ದಾರೆ.

ತಕ್ಷಣ ಹೀರಯ್ಯ ಅವರನ್ನು ಸಂಚಾರ ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿ ಮತ್ತು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದರಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ.

RELATED ARTICLES
- Advertisment -
Google search engine

Most Popular