Saturday, April 19, 2025
Google search engine

Homeರಾಜಕೀಯಗೃಹಲಕ್ಷ್ಮಿಗೆ ನಮ್ಮ ವಿರೋಧವಿಲ್ಲ, ಉಳಿದ ಕಾರ್ಯಕ್ರಮಗಳ ಬಗ್ಗೆಯೂ ಸರ್ಕಾರದ ಗಮನವಿರಲಿ

ಗೃಹಲಕ್ಷ್ಮಿಗೆ ನಮ್ಮ ವಿರೋಧವಿಲ್ಲ, ಉಳಿದ ಕಾರ್ಯಕ್ರಮಗಳ ಬಗ್ಗೆಯೂ ಸರ್ಕಾರದ ಗಮನವಿರಲಿ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯನ್ನು ಬಿಜೆಪಿ ಸ್ವಾಗತಿಸುತ್ತದೆ. ಈ ಕಾರ್ಯಕ್ರಮಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಪಂಚ ಗ್ಯಾರಂಟಿಗಳಿಗೆ ಸೀಮಿತವಾಗದೇ ಉಳಿದ ಕಾರ್ಯಕ್ರಮಗಳತ್ತವೂ ಸರ್ಕಾರ ಗಮನ ಹರಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ತಿಳಿಸಿದರು.

ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ಮಾತನಾಡಿದರು, ಗೃಹಲಕ್ಷ್ಮಿ ಯೋಜನೆಯನ್ನು ಮೈಸೂರಿನಲ್ಲಿ ಆರಂಭಿಸಿದ್ದಾರೆ. ಮನೆ ಯಜಮಾನಿಗೆ ತಿಂಗಳಿಗೆ ೨ ಸಾವಿರ ರೂಪಾಯಿ ಕೊಡುತ್ತಿದ್ದಾರೆ. ಹಾಗಾಗಿ ಯೋಜನೆಯನ್ನು ಸ್ವಾಗತಿಸುತ್ತೇವೆ. ಆದರೆ, ಸರ್ಕಾರ ಎಲ್ಲ ಮಹಿಳೆಯರಿಗೂ ೨ ಸಾವಿರ ರೂ ಹಾಕುತ್ತೇವೆ ಎಂದಿತ್ತು. ಈಗ ಮಾತಿಗೆ ತಪ್ಪಿ ಮನೆಯ ಯಜಮಾನಿಗೆ ಮಾತ್ರ ಹಾಕುತ್ತೇವೆ ಎಂದಿದ್ದಾರೆ. ಹಾಗಾಗಿ, ಬಹಳಷ್ಟು ಮಹಿಳೆಯರಿಗೆ ಯೋಜನೆಯ ಬಗ್ಗೆ ಅಸಮಾಧಾನವಿದೆ ಎಂದರು.

ಸರ್ಕಾರ ನೂರು ದಿನಗಳ ಸಂಭ್ರಮವನ್ನು ಆಚರಿಸುತ್ತಿದೆ. ಆದರೆ, ನೂರಾರು ಸಮಸ್ಯೆಗಳು ಜೊತೆ ಜೊತೆಗಿವೆ. ಸಂಭ್ರಮ ಕೇವಲ ಮುಖ್ಯಮಂತ್ರಿಗಳಿಗೆ, ಉಪ ಮುಖ್ಯಮಂತ್ರಿಗಳಿಗೆ, ಸಚಿವರಿಗೆ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ವೇಣುಗೋಪಾಲ್, ಸುರ್ಜೇವಾಲಾ ಅವರಿಗೆ ಮಾತ್ರ ಇದೆ. ರಾಜ್ಯದ ೬ ಕೋಟಿ ಜನರಿಗೆ ಸಂಭ್ರಮವಿಲ್ಲ.

ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ಈ ಕೂಡಲೇ ನಿಲ್ಲಿಸಬೇಕು. ಕಾವೇರಿ ಕೊಳ್ಳದಲ್ಲಿಯೇ ಕುಡಿಯುವ ನೀರಿಗೆ ತತ್ವಾರ ನಿರ್ಮಾಣವಾಗುತ್ತಿದೆ. ಮೊದಲು ಇಂಥ ಸಮಸ್ಯೆಗಳನ್ನು ಪರಿಹರಿಸಿ. ಗುತ್ತಿಗೆದಾರರಿಗೆ ಹಣ ನೀಡಿ, ವರ್ಗಾವಣೆ ದಂಧೆ ನಿಲ್ಲಿಸಬೇಕು ಎಂದರು. ಸರ್ಕಾರ ಆರಂಭಿಸಿರುವ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಎಲ್ಲ ಕ್ಷೇತ್ರಗಳಲ್ಲಿಯೂ ನಡೆಯುತ್ತಿದೆ. ನಮ್ಮ ಪಕ್ಷದ ಕೆಲವರು ಹೋಗಿದ್ದಾರೆ. ಗೃಹಲಕ್ಷ್ಮಿ ಮನೆ ಯಜಮಾನಿಗೆ ತಲುಪಲಿದೆ ಎಂದು ಭಾಗಿಯಾಗಿದ್ದಾರೆ ಎಂದು ಹೇಳಿದರು.

ಪದವಿ ಆದವರಿಗೆ ನೀಡುವ ಯುವನಿಧಿ ಯೋಜನೆಯನ್ನು ಡಿಸೆಂಬರ್?ನಲ್ಲಿ ಉದ್ಘಾಟನೆ ಮಾಡುತ್ತೇವೆ ಎನ್ನುತ್ತಿದ್ದಾರೆ. ಈಗಾಗಲೇ ಅಕ್ಕಿ ಸಿಗುತ್ತಿಲ್ಲ ಎಂದು ೧೭೦ ರೂ. ಹಣ ಕೊಡುತ್ತಿದ್ದಾರೆ. ಇಷ್ಟು ಹಣಕ್ಕೆ ೫ ಕೆ.ಜಿ ಅಕ್ಕಿ ಎಲ್ಲಿ ಸಿಗುತ್ತದೆ ಎಂದು ಪ್ರಶ್ನಿಸಿದರು.

RELATED ARTICLES
- Advertisment -
Google search engine

Most Popular