Sunday, April 20, 2025
Google search engine

Homeಸ್ಥಳೀಯಪತ್ರಿಕಾ ವಿತರಣೆ ಕೆಲಸಕ್ಕೂ ಗೌರವವಿದೆ

ಪತ್ರಿಕಾ ವಿತರಣೆ ಕೆಲಸಕ್ಕೂ ಗೌರವವಿದೆ

ಮೈಸೂರು: ಎಲ್ಲ ಕೆಲಸಕ್ಕೂ ಗೌರವವಿದೆ. ಹಾಗೆಯೇ ಪತ್ರಿಕಾ ವಿತರಣೆ ಕೆಲಸಕ್ಕೂ ಗೌರವವಿದೆ ಎಂದು ಕೆಪಿಸಿಸಿ ಸದಸ್ಯ ಗುರುಪಾದಸ್ವಾಮಿ ಹೇಳಿದರು.
ಚಾಮುಂಡಿಪುರಂನಲ್ಲಿರುವ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ಅಪೂರ್ವ ಸ್ನೇಹ ಬಳಗದ ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಹಿರಿಯ ಪತ್ರಿಕಾ ವಿತರಕರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪತ್ರಿಕೆ ವಿತರಣೆಯೆಂದರೆ ಸಣ್ಣ ಕೆಲಸವಲ್ಲ. ಎಲ್ಲ ಕೆಲಸಕ್ಕೂ ಅದರದೇ ಆದ ಗೌರವವಿದೆ. ಪತ್ರಿಕೆ ಎಷ್ಟೇ ಮುದ್ರಣವಾದರೂ ಓದುಗರನ್ನು ತಲುಪಿದಾಗಲೇ ಸಾರ್ಥಕವಾಗುವುದು. ಬೆಳಗ್ಗೆ ಪತ್ರಿಕೆ ಬರದಿದ್ದರೆ ಎಲ್ಲರಿಗೂ ನೆನಪಾಗುವುದು ವಿತರಕರು ಎಂದು ಹೇಳಿದರು.

ಕೊರೊನಾದಂಥ ಸಂಕಷ್ಟದ ಸಮಯದಲ್ಲೂ ಪ್ರಾಣವನ್ನೂ ಲೆಕ್ಕಿಸದೆ, ಸಮಯಕ್ಕೆ ಸರಿಯಾಗಿ ಪತ್ರಿಕೆಗಳನ್ನು ಮುಟ್ಟಿಸುವ ಕೆಲಸವನ್ನು ವಿತರಕರು ಮಾಡುತ್ತಾರೆ. ಅವರನ್ನು ಸನ್ಮಾನಿಸುವುದು ತುಂಬಾ ದೊಡ್ಡ ಕೆಲಸ ಎಂದು ಅಭಿಪ್ರಾಯಪಟ್ಟರು.
ಪತ್ರಿಕಾ ಪ್ರತಿನಿಧಿಗಳ ಸಂಘದ ಪ್ರಧಾನ ಕಾರ್ಯದರ್ಶಿ ರವಿ ಮಾತನಾಡಿ, ಪತ್ರಿಕಾ ವಿತರಕರಿಗೆ ಆರೋಗ್ಯ ವಿಮೆ, ಪತ್ರಿಕಾ ಶಾಶ್ವತ ಸೂರು ವ್ಯವಸ್ಥೆ, ಈ ಹಿಂದೆ ಸರ್ಕಾರ ಘೋಷಣೆ ಮಾಡಿದ ಪತ್ರಿಕಾ ವಿತರಕರ ಕ್ಷೇಮಾಭಿವೃದ್ದಿ ಸಂಘದ ನಿಧಿಯನ್ನು ಈ ಕೂಡಲೇ ಬಿಡುಗಡೆಗೊಳಿಸಬೇಕು. ಅದರಿಂದ ಪತ್ರಿಕಾ ವಿತರಕರಿಗೆ ಅನುಕೂಲವಾಗುತ್ತದೆ. ಸರ್ಕಾರದ ವತಿಯಿಂದ ಪ್ರತಿವರ್ಷ ಪತ್ರಿಕಾ ವಿತರಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ಕೆ ಮುಂದಾಗಬೇಕೆಂದು ಮನವಿ ಮಾಡಿದರು.

ಇದೇ ವೇಳೆ ಹಿರಿಯ ಪತ್ರಿಕಾ ವಿತರಕರಾದ ಚಂದ್ರು, ಲೋಕೇಶ್, ಮಹದೇವ್, ಎಂ.ಪಿ.ಗುಂಡಪ್ಪ, ಕನಕ ರತ್ನ, ರಾಮಚಂದ್ರು, ಪ್ರಭಾಕರ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಜರ್‌ಬಾದ್ ನಟರಾಜ್, ಕೆ.ಆರ್.ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್, ಉದ್ಯಮಿ ಜಯರಾಮ್, ಕಾಂಗ್ರೆಸ್ ಮುಖಂಡರಾದ ಶ್ರೀಪಾಲ್, ಹೊಯ್ಸಳ ಟ್ರಸ್ಟ್ ಅಧ್ಯಕ್ಷ ಎಂ.ಪಿ.ರಾಜೇಶ್, ಮಂಜೇಗೌಡನ ಕೊಪ್ಪಲು ರವಿ, ಲೋಕೇಶ್, ವರುಣ ಮಹದೇವ್, ಯೋಗೇಶ್ ಯಾದವ್, ಬಸವಣ್ಣ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು.

RELATED ARTICLES
- Advertisment -
Google search engine

Most Popular