ದಾವಣಗೆರೆ; ಮಾಯಕೊಂಡದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಪ್ರೌಢಶಾಲೆಯಲ್ಲಿ ಮಂಗಳವಾರ ರಾತ್ರಿ ಊಟದ ನಂತರ ರಾತ್ರಿ ಊಟದ ನಂತರ ಕೆಲ ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಸೆ.20ರಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ ಎಂ.ವಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್ ಭೇಟಿ ನೀಡಿ ಪರಿಶೀಲಿಸಿದರು. ಮಂಗಳವಾರ ರಾತ್ರಿ ಊಟಕ್ಕೆ ಮಾಡಿದ ಅನ್ನ ಸರಿಯಾಗಿ ಬೇಯಿಸದ ಕಾರಣ ಕೆಲ ವಿದ್ಯಾರ್ಥಿಗಳಿಗೆ ಹೊಟ್ಟೆನೋವು ಕಾಣಿಸಿಕೊಂಡಿದೆ. ಕೂಡಲೇ ಈ ವಿದ್ಯಾರ್ಥಿಗಳನ್ನು ಸಿ. ಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುವುದು.
ವಿದ್ಯಾರ್ಥಿಗಳ ಆರೋಗ್ಯದಲ್ಲಿ ಸುಧಾರಣೆ, ಯಾವುದೇ ಅಪಾಯವಿರುವುದಿಲ್ಲ. ಮಕ್ಕಳ ಪೋಷಕರಿಗೂ ಮಾಹಿತಿ ನೀಡಲಾಗಿದೆ. ಜಿಲ್ಲಾಧಿಕಾರಿ ಹಾಗೂ ಸಿ.ಇ.ಓ ವಸತಿ ಶಾಲೆ ಅಡುಗೆ ಕೋಣೆ, ಉಗ್ರಗಾಮಿ ಪರಿಶೀಲನೆ ನಡೆಸಿ ಸ್ವಚ್ಛತೆ ಕಾಪಾಡುವಂತೆ ಸೂಚನೆ ನೀಡಿದರು. ನಿರ್ಲಕ್ಷ್ಯ ವಹಿಸಿರುವ ಈ ವಸತಿ ಶಾಲೆ ವಾರ್ಡನ್ ಅವರನ್ನು ಕೂಡಲೇ ಬದಲಾಯಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಲಾಯಿತು.
ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್. ಕೆ ಉಪಸ್ಥಿತರಿದ್ದರು. ಸಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ: ಮಾಯಕೊಂಡ ವಸತಿ ಪ್ರೌಢಶಾಲೆಯಲ್ಲಿ ಮಂಗಳವಾರ ರಾತ್ರಿ ಊಟದ ನಂತರ 3 ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಕಾಣಿಸಿಕೊಂಡು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದು, ಬುಧವಾರ ಶಾಸಕ ಕೆ.ಎಸ್.ಬಸವಂತಪ್ಪ, ಜಿಲ್ಲಾಧಿಕಾರಿ ಡಾ.ವೆಂಕಟೇಶ ಎಂ.ಸುರೇಶ್ ಇಟ್ನಾಳ್, ವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು.