Saturday, April 19, 2025
Google search engine

Homeಅಪರಾಧಕಾನೂನುಪ್ರೇಮಕುಮಾರಿ ಪ್ರಕರಣ: ಮಾಜಿ ಸಚಿವ ಎಸ್.ಎ ರಾಮದಾಸ್ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಪ್ರೇಮಕುಮಾರಿ ಪ್ರಕರಣ: ಮಾಜಿ ಸಚಿವ ಎಸ್.ಎ ರಾಮದಾಸ್ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಮೈಸೂರು:  ಪ್ರೇಮಕುಮಾರಿ ಪ್ರಕರಣದಲ್ಲಿ ವಂಚನೆ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಮಾಜಿ ಶಾಸಕ ಎಸ್.ಎ ರಾಮದಾಸ್​​ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾಗೊಳಿಸಿದೆ.

ಮಾಜಿ ಶಾಸಕ ಎಸ್.ಎ ರಾಮದಾಸ್ ವಿರುದ್ಧ 2013ರಲ್ಲಿ ಪ್ರೇಮಕುಮಾರಿ ಎಂಬುವವರು ತನ್ನನ್ನು ಮದುವೆಯಾಗಿ ವಂಚಿಸಿದ್ದಾರೆ. ಮತ್ತು ಬೆದರಿಕೆ, ಕೊಲೆ ಯತ್ನ ಸೇರಿ ಹಲವು ಆರೋಪ ಮಾಡಿ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ  ರಾಮದಾಸ್ ಹೈಕೋರ್ಟ್​ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್​ ಪ್ರರಣವನ್ನು ರದ್ದುಪಡಿಸಲು ನಿರಾಕರಿಸಿತ್ತು.

ಇದನ್ನು ಪ್ರಶ್ನಿಸಿ ರಾಮದಾಸ್ ಸುಪ್ರೀಂಕೋರ್ಟ್ ​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂಕೋರ್ಟ್  ಕೂಡ ಅರ್ಜಿಯನ್ನು ವಜಾಗೊಳಿಸಿದೆ.

RELATED ARTICLES
- Advertisment -
Google search engine

Most Popular