Saturday, April 19, 2025
Google search engine

Homeರಾಜಕೀಯಕಾಂಗ್ರೆಸ್ ನಿರ್ನಾಮ ಮಾಡುವ ಉದ್ದೇಶದಿಂದ ಬಿಜೆಪಿ -ಜೆಡಿಎಸ್ ಮೈತ್ರಿ: ಕೆ.ಎಸ್.ಈಶ್ವರಪ್ಪ

ಕಾಂಗ್ರೆಸ್ ನಿರ್ನಾಮ ಮಾಡುವ ಉದ್ದೇಶದಿಂದ ಬಿಜೆಪಿ -ಜೆಡಿಎಸ್ ಮೈತ್ರಿ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಕಾಂಗ್ರೆಸ್ ನಿರ್ನಾಮ ಮಾಡುವ ಉದ್ದೇಶದಿಂದ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ದೇಶದಲ್ಲಿ ಕಾಂಗ್ರೆಸ್ ಬೇಡ ಎಂದು ಜನ ತೀರ್ಮಾನ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿಗಳೆಲ್ಲರೂ ಕೂಡ ಒಟ್ಟಾಗಬೇಕು. ಕಾಂಗ್ರೆಸ್ ನಿರ್ನಾಮ ಮಾಡ್ಬೇಕೆಂಬ ಉದ್ದೇಶದಿಂದ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದೇವೆ ಎಂದರು.

ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಹೋಗುತ್ತೇವೆ. ಲೋಕಸಭಾ ಚುನಾವಣೆ ತಾ.ಪಂ,ಗ್ರಾ.ಪಂ, ಚುನಾವಣೆಯಂತಲ್ಲ. ಲೋಕಸಭಾ ಚುನಾವಣೆ ಅಂದ್ರೇ ದೇಶವನ್ನು ಉಳಿಸುವ ಚುನಾವಣೆಯಾಗಿದೆ.ಬಿಜೆಪಿ-ಜೆಡಿಎಸ್ ಒಂದಾಗಿ ಚುನಾವಣೆ ಎದುರಿಸಿ,ಯಶಸ್ಸು ಗಳಿಸುತ್ತೇವೆ ಎಂದರು.

ಒಂದು ಸೀಟನ್ನ ಕಾಂಗ್ರೆಸ್‌ಗೆ ಕೊಡಬಾರದು ಎಂಬುದು ರಾಜ್ಯದ ಜನರ ಅಪೇಕ್ಷೆಯಾಗಿದೆ. ಈ ಹಿಂದೆ ಸಿಎಂ ಆಗಿದ್ದ ಸಿದ್ದರಾಮಯ್ಯ ಬಿಜೆಪಿ ಎರಡು ಸೀಟು ಕೂಡ ಬರಲ್ಲ ಅಂತ ಹೇಳಿಕೆ ನೀಡಿದ್ದರು.ಕಾಂಗ್ರೆಸ್‌ಗೆ ಒಂದೇ ಸೀಟು ಬಂದಿತ್ತು, ಬಿಜೆಪಿ ೨೫ ಸೀಟು ಗೆದ್ದಿತ್ತು.ಕಾಂಗ್ರೆಸ್ ವ್ಯಕ್ತಿಗತ ಯೋಚನೆ ಮಾಡುತ್ತೆ. ನಾವು ದೇಶಕ್ಕಾಗಿ ಯೋಚನೆ ಮಾಡ್ತೇವೆ.ಬಿಜೆಪಿಗೆ ಯಾವುದೇ ಭಯವಿಲ್ಲ. ಚುನಾವಣೆ ನಂತರ ಉತ್ತರ ಸಿಗುತ್ತದೆ ಎಂದರು.

RELATED ARTICLES
- Advertisment -
Google search engine

Most Popular