Tuesday, April 8, 2025
Google search engine

Homeರಾಜಕೀಯಬಿಜೆಪಿಯಲ್ಲಿ ಹಣವೇ ಪ್ರಧಾನ ಅಲ್ಲ-ಸಿ.ಟಿ.ರವಿ

ಬಿಜೆಪಿಯಲ್ಲಿ ಹಣವೇ ಪ್ರಧಾನ ಅಲ್ಲ-ಸಿ.ಟಿ.ರವಿ

ಮಂಗಳೂರು (ದಕ್ಷಿಣ ಕನ್ನಡ): ಬಿಜೆಪಿ ಎಂಎಲ್ ಎ ಟಿಕೆಟ್​​ ಹೆಸ್ರಲ್ಲಿ ಚೈತ್ರಾ ಕುಂದಾಪುರ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ‌ಮಂಗಳೂರಲ್ಲಿ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ. ಹಣವೇ ಬಿಜೆಪಿಯಲ್ಲಿ ಪ್ರಧಾನ ಅಲ್ಲ. ಹಾಗಿದ್ದರೆ ನೂರಾರು ಬಡ ಕಾರ್ಯಕರ್ತರು ನಮ್ಮಲ್ಲಿ ಸಂಸದರು, ಶಾಸಕರು ಆಗುತ್ತಿರಲಿಲ್ಲ ಎಂದರು.
ಬಿಜೆಪಿಯಲ್ಲಿ ಹಣವೇ ಪ್ರಧಾನವಾಗಿದ್ದರೆ ಬೈಂದೂರಿನ ಟಿಕೆಟ್ ಬಡ ಕಾರ್ಯಕರ್ತ ಗುರುರಾಜ್ ಶೆಟ್ಟಿ ಗಂಟಿಹೊಳೆ, ಸುಳ್ಯದ ಟಿಕೆಟ್ ಬಡ ಮಹಿಳೆ ಭಾಗೀರಥಿ ಮುರುಳ್ಯ ಅವರಿಗೆ ಸಿಗುತ್ತಿರಲಿಲ್ಲ. ಕೋಟಾ ಶ್ರೀನಿವಾಸ್ ಪೂಜಾರಿ, ಸುನೀಲ್ ಕುಮಾರ್, ನಳಿನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ ಅವರು ನಾಯಕರಾಗುತ್ತಿರಲಿಲ್ಲ ಎಂದರು.
ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರನ್ನು ಮೋಸ‌ ಮಾಡಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿಯಂತಹ ಬುದ್ದಿವಂತರ ಜಿಲ್ಲೆಯ ಇವರೇ ಮೋಸ ಹೋಗಿದ್ದಾರೆ. ಅವರು‌ ನೇರವಾಗಿ ಫೋನ್ ಮಾಡಿದರೂ ಬಿಜೆಪಿ ನಾಯಕರು ಸಂಪರ್ಕಕ್ಕೆ ಸಿಗುತ್ತಿದ್ದರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯೇ ಅವರ ಜೊತೆ ತುಳು ಭಾಷೆಯಲ್ಲೇ ಮಾತಾಡುತ್ತಿದ್ದರು. ನಳಿನ್ ಕುಮಾರ್ ಕಟೀಲ್, ಕೋಟಾ ಶ್ರೀನಿವಾಸ ಪೂಜಾರಿಯೂ ಮಾತಾಡುತ್ತಿದ್ದರು ಎಂದರು. ಅವರ ಬಳಿಯೇ ನೇರ ಫೋನ್ ಮಾಡಿ ಮಾತನಾಡುವ ಅವಕಾಶ ಗೋವಿಂದ ಬಾಬು ಪೂಜಾರಿಗೆ ಇತ್ತು. ಈ ಪ್ರಕರಣದ ಬಗ್ಗೆ ಸತ್ಯ ಬಹಿರಂಗ ಆಗಬೇಕು, ಸಮಗ್ರ ತನಿಖೆ ಆಗಬೇಕು. ಯಾರೇ ಇದ್ದರೂ ಸೂಕ್ತ ತನಿಖೆ ನಡೆದು ಕ್ರಮ ಆಗಲಿ. ಯಾರದ್ದೋ ಹೆಸರು ಕೇಳಿ ಬರುತ್ತಿದೆ ಅನ್ನೋದು ಬೇರೆ. ಮೊದಲು ಸಮಗ್ರ ತನಿಖೆ ಆಗಲಿ ಎಂದರು. ಇನ್ನು ನಾವು ಪರಿಷತ್ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಚರ್ಚೆ ಆಗುತ್ತಿದೆ. ಆದರೆ ಅಂತಿಮ ಆಗಿಲ್ಲ. ಹಾಗಾಗಿ‌ ಅದು ವರಿಷ್ಠರ ತೀರ್ಮಾನ, ನಾವು ಯಾವುದೇ ಚುನಾವಣೆಗೆ ನಮ್ಮ ಹಂತದಲ್ಲಿ ಸಿದ್ಧವಾಗುತ್ತಿದ್ದೇವೆ. ಈ ಮೈತ್ರಿ ವಿಚಾರದಲ್ಲಿ ವರಿಷ್ಠರ ನಡೆ ಮುಖ್ಯವಾಗಿದೆ ಎಂದರು.

RELATED ARTICLES
- Advertisment -
Google search engine

Most Popular