Saturday, April 19, 2025
Google search engine

Homeರಾಜ್ಯಲೋಕಾ ಬಲೆಗೆ ಬಿದ್ದ ಸರ್ಕಾರಿ ಅಧಿಕಾರಿ.!

ಲೋಕಾ ಬಲೆಗೆ ಬಿದ್ದ ಸರ್ಕಾರಿ ಅಧಿಕಾರಿ.!

ಮಳವಳ್ಳಿ: 40 ಸಾವಿರ ಲಂಚ ಪಡೆಯುವಾಗ ಮಳವಳ್ಳಿ ಪುರಸಭೆಯ ಸಮುದಾಯ ವ್ಯವಹಾರ ಅಧಿಕಾರಿ ನಾಗೇಂದ್ರ ಆರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಶ್ರೀರಂಗಪಟ್ಟಣ ಪುರಸಭೆ ಕಚೇರಿಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು  ದಾಳಿ ನಡೆಸಿ, ಅಧಿಕಾರಿಯನ್ನು ಬಂಧಿಸಿದ್ದಾರೆ.

ಹಾವೇರಿ ಮೂಲದ ಶಿವರಾಜ್ ಹೊಳ್ಳಾಲ್ ಎಂಬುವವರಿಂದ ವಿಕಲಚೇತನರಿಗೆ ನೀಡಿದ್ದ ವಾಹನಗಳ ಹಣ ಬಿಡುಗಡೆಗೆ ನಾಗೇಂದ್ರ ಆರ್ 1 ಲಕ್ಷದ 20 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದು, 40 ಸಾವಿರ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದಿದ್ದಾರೆ.

ಮಂಡ್ಯ ಲೋಕಾಯುಕ್ತ ಡಿವೈಎಸ್ ಪಿ ಸುನೀಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

RELATED ARTICLES
- Advertisment -
Google search engine

Most Popular