Sunday, April 20, 2025
Google search engine

Homeರಾಜ್ಯನಾಳೆ ಬಂದ್‌ಗೆ ಅವಕಾಶವಿಲ್ಲ, ಪ್ರತಿಭಟನೆಗೆ ಅಡ್ಡಿಯಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ನಾಳೆ ಬಂದ್‌ಗೆ ಅವಕಾಶವಿಲ್ಲ, ಪ್ರತಿಭಟನೆಗೆ ಅಡ್ಡಿಯಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಕಾವೇರಿ ವಿಚಾರವಾಗಿ ಕರ್ನಾಟಕ ಬಂದ್‌ಗೆ ಅವಕಾಶ ಇಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ನಾನು ಪ್ರತಿಭಟನಾಕಾರರಿಗೆ ಅಡ್ಡಿ ಮಾಡಲ್ಲ. ಸುಪ್ರಿಂ ಕೋರ್ಟ್ ಬಂದ್ ಮಾಡಬಾರದು ಅಂತ ಹೇಳಿದೆ. ಜವಾಬ್ದಾರಿ ಇರುವವರು ಅರಿತುಕೊಳ್ತಾರೆ. ನಾವು ಸಾರ್ವಜನಿಕರನ್ನು ರಕ್ಷಣೆ ಮಾಡಲೇಬೇಕು. ನಾವು ಜನತೆಗೆ ರಕ್ಷಣೆ ಕೊಟ್ಟೇ ಕೊಡುತ್ತೇವೆ. ಬಂದ್ ಮಾಡಲು ಅವಕಾಶ ಇಲ್ಲ. ರಾಜ್ಯದ ಹಿತರಕ್ಷಣೆ ಕಾಪಾಡಬೇಕು.

ನಾಳೆ CWMA ಮೀಟಿಂಗ್ ಇದೆ. ನಮ್ಮ ಅಧಿಕಾರಿಗಳಿಗೆ ಸಭೆಗೆ ಹಾಜರಾಗಲು ಹೇಳಿದ್ದೇವೆ. ವರ್ಚುವಲ್ ಮೂಲಕ ಸಭೆಗೆ ಹಾಜರಾಗುವುದು ಬೇಡ ಅಂದಿದ್ದೇವೆ. ನೀವೆ ಖುದ್ದು ಹಾಜರಾಗಿ ಅಂತ ಹೇಳಿದ್ದೇವೆ. ಈ ಸಂಬಂಧ ಕಾನೂನು ತಜ್ಞರು, ಹಿರಿಯರ ಸಭೆ ಮಾಡುತ್ತೇವೆ. ಈಗ ಎರಡು ಸಾವಿರ ಕ್ಯೂಸೆಕ್ ನೀರು ಹೋಗುತ್ತಿರಬಹುದು. ನಾಳೆ ತೀರ್ಪು ನೋಡಿಕೊಂಡು ಕೋರ್ಟ್‌ಗೆ ಹೋಗ್ತೇವೆ ಎಂದರು.

RELATED ARTICLES
- Advertisment -
Google search engine

Most Popular