ಬಾಗಲಕೋಟೆ: ಇತರರಿಗೂ ಮಾದರಿಯಾಗುವಂತೆ ಶೂನ್ಯ ಟಿಕೆಟ್ ಪಡೆದು ಸರ್ಕಾರಿ ಬಸ್ ನಲ್ಲಿ ಜಿಲ್ಲಾಧಿಕಾರಿಯೊಬ್ಬರು ಪ್ರಯಾಣಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ತೇರದಾಳಕ್ಕೆ ತೆರಳುವ ವೇಳೆ ಜಿಲ್ಲಾಧಿಕಾರಿ ಕೆ.ಎ.ಜಾನಕಿ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸಿದರು.
ಈ ವೇಳೆ ಜಿಲ್ಲಾಧಿಕಾರಿಯವರು ಶೂನ್ಯ ದರ ಟಿಕೆಟ್ ಪಡೆದು ಪ್ರಯಾಣಿಸಿದ್ದಾರೆ. ಅವರೊಂದಿಗಿದ್ದ ಎಲ್ಲಾ ಮಹಿಳಾ ಅಧಿಕಾರಿಗಳು ಶಕ್ತಿ ಯೋಜನೆಯಡಿ ತಮ್ಮ ಆಧಾರ್ ಕಾರ್ಡ್ ತೋರಿಸಿ ಶೂನ್ಯ ದರ ಟಿಕೆಟ್ ಪಡೆದಿದ್ದಾರೆ.