ಮೈಸೂರು: ಯಾರು ಯಾರನ್ನು ನೆನೆಯಲಿನಾ ಯಾರು ಯಾರನ್ನು ನೆನೆಯಲಿ ಕನ್ನಡ ದೀಪ, ಸಮೃದ್ದಿ ಅಭಿವೃದ್ಧಿ ಶಾಂತಿ ಸಮೃದ್ದಿಯ ನನ್ನ ಮಾತಿನ ಪರಿವಿಡಿ. ಪೂಜ್ಯ ಕನ್ನಡಿಗರಿಗೆ ಪೂಜ್ಯ ಕನ್ನಡಕ್ಕೆ ಈ ದೇವಾಲಯ ಪ್ರೇಮಾಲಯಕ್ಕೆ ಸಾವಿರದ ಶರಣುಗಳು. ಕರ್ನಾಟಕ ಏಕೀಕರಣವಾಗಿ ಐವತ್ತುವರ್ಷ ವಾಯಿತು. ಹೀಗಾಗಿ ಕರ್ನಾಟಕ ಐದಶ ಅಂತಾ ಕರೆಯೋಣ. ಕರ್ನಾಟಕದ ಐದಶದ ಜೊತೆಗೆ ನನ್ನ ಕಲಾ ಕಾಯಕಲ್ಪಕ್ಕೂ ೫೦ ವರ್ಷವಾಗಿದೆ. ಈ ನನ್ನ ಐದಶದಲ್ಲಿ ಸಿಕ್ಕಿದ ಈ ಅವಕಾಶ ಬಹಳ ಬೆಲೆ ಬಾಳುವಂತಹದ್ದು. ಈ ಅವಕಾಶಕ್ಕಾಗಿ ನಿರಾಯಾಸವಾಗಿ ಬಂದಿಲ್ಲ. ಇದಕ್ಕಾಗಿ ಸಾವಿರ ಮೆಟ್ಟಿಲು ಹತ್ತಿ ಬಂದಿದ್ದೇನೆ ಎಂದು ನಾದಬ್ರಹ್ಮ ಹಂಸಲೇಖ ಹೇಳಿದರು.
ಮೈಸೂರು ದಸರಾ ಚಾಲನೆ ನೀಡಲು ನನಗೆ ಅವಕಾಶ ನೀಡಿದ್ದಕ್ಕೆ ಯಾರನ್ನು ಮೊದಲು ನೆನೆಯಲಿ ಅಪ್ಪ ಗೋವಿಂದರಾಜ ಮಾನೆ. ಅಮ್ಮ ರಾಜಮ್ಮ ಗುರು ನೀಲಕಂಠ ಅಥವಾ ನಾದ ನಾಟಕರಂಗ ಸರ್ಕಾರ ಅಥವಾ ಸಂವಿಧಾನವನ್ನೇ ಸಂವಿಧಾನದ ಧ್ವನಿ ಸಿದ್ದರಾಮಯ್ಯ ಅವರನ್ನೇ ಪ್ರಬಲ ಶಕ್ತಿ ಸಂಘಟಕ ಡಿಸಿಎಂ ಕ ಡಿ ಕೆ ಶಿವಕುಮಾರ್, ನನ್ನ ಹೆಸರು ಸೂಚಿಸಿದ ಡಾ.ಎಚ್.ಸಿ ಮಹದೇವಪ್ಪ ಅವರನ್ನೇ ನನ್ನ ಹೆಂಡತಿ ಮಕ್ಕಳು ಅಭಿಮಾನಿಗಳನ್ನೇ ಅಥವಾ ಭೂಮಿ ತಾಯಿಯನ್ನೇ ಯಾರು ಯಾರು ಅಂತ ನೆನೆಯಲ್ಲಿ ಎಂದು ಹೇಳುವ ಮೂಲಕ ಧನ್ಯವಾದ ಹೇಳಿದರು.
ನಾನು ಈಗ ಕನ್ನಡದ ದೀಪ ಹಚ್ಚಿದ್ದೇನೆ. ಕನ್ನಡಿಗರ ಆಶಯದಂತೆ ದೀಪ ಹಚ್ಚಿದ್ದೇನೆ. ದಸರಾ ಎನ್ನುವುದು ಜೀವಂತ ಮಹಾಕಾವ್ಯ. ದಕ್ಷಿಣ ಭಾರತದ ವೀರರ ಕಥೆಯೆ ಈ ಮಹಾಕಾವ್ಯ, ವಿಜಯನಗರದ ಮಹಾಸಾಮ್ರಾಜ್ಯದಿಂದ ಆರಂಭವಾಗಿದೆ. ದಸರಾ ಒಂದು ರೀತಿ ಕಥಾ ಕಣಜ. ಇದು ಮಹಾಕಾವ್ಯವಾಗಿ ಬೆಳಗಬೇಕು. ಕನ್ನಡ ನಮ್ಮ ಶೃತಿ ಆಗಬೇಕು ಅಭಿವೃದ್ಧಿ ನಮ್ಮ ಕೃತಿ ಆಗಬೇಕು. ಕನ್ನಡದ ಭಾಷೆಗೆ ಮಿತಿ ಇದೆ. ಆದರೆ ಭಾವಕ್ಕೆ ಮಿತಿ ಎಲ್ಲಿದೆ? ನಮಗೆ ದೆಹಲಿ ಬೇಕು, ದೆಹಲಿಗೂ ನಾವು ಬೇಕು. ಆದರೆ ದೆಹಲಿಗೆ ಕನ್ನಡವೇ ಬೇಕಾಗುತ್ತಿಲ್ಲ ಇದಕ್ಕೆ ತಲೆ ಕೆಡಿಸಿ ಕೊಳ್ಳೋದು ಬೇಡ. ನಾವು ಕನ್ನಡವನ್ನು ಜಗತ್ತಿನಲ್ಲಿ ಮೆರೆಸಬೇಕಿದೆ. ಕರ್ನಾಟಕದ ಶಾಂತಿ ಸಮೃದ್ಧಿ ಕನ್ನಡಿಗರ ಮಂತ್ರ ಆಗಬೇಕು. ಕರ್ನಾಟಕದಲ್ಲಿ ವಾಸ ಮಾಡುವವರೆಲ್ಲಾ ಕನ್ನಡಿಗರು. ಯಾರಿಗೂ ಕನ್ನಡ ಮಾತಾಡಲು ಬರಲ್ಲ. ಯಾರಿಗೆ ಅರ್ಥವಾಗಲ್ಲ ಈ ಬಗ್ಗೆ ಒಂದು ಸಮೀಕ್ಷೆ ಆಗಬೇಕು. ಕಾರ್ಪೊರೇಟ್ ಸಂಸ್ಥೆಯೆ ಈ ಸಮೀಕ್ಷೆ ಮಾಡುತ್ತದೆ ಇದಕ್ಕೆ ಜನರ ಸಹಕಾರ ಇರಲಿ ಎಂದರು.
ನಮ್ಮ ಕಾವೇರಿಗೆ ಒಂದು ಮಿತಿಯಿದೆ ಕನ್ನಡದ ಭಾಷೆಗೆ ಒಂದು ಮಿತಿಯಿದೆ. ಅದರ ಭಾವಕ್ಕೆ ಎಲ್ಲಿ ಮಿತಿಯಿದೆ ? ಶಾಂತಿ ಮಂತ್ರ ಕನ್ನಡ ಅಭಿವೃದ್ದಿ ಮತ್ತು ಶಾಂತಿ ಮಂತ್ರ. ಇಂದು ಕನ್ನಡಿಗರಿಗೆ ಒಂದಂಶವಾಗಬೇಕು ಪ್ರತಿಭೆ ಉದ್ಯಮ ಮತ್ತು ಅಗತ್ಯ, ಹುಬ್ಬಳ್ಳಿ ಬೆಳಗಾವಿ ಜೋಡಿ ಆಗಬೇಕು, ಮಂಗಳೂರು ಮೈಸೂರು ಜೋಡಿ ಆಗಬೇಕು. ಈ ಎರಡು ಜಿಲ್ಲೆಗಳಲ್ಲಿ ವ್ಯಾಪಾರ ಇದೆ ಸಂಪ್ರದಾಯಿಯೂ ಇದೆ.
ಕನ್ನಡ ಓದಲು, ಬರೆಯಲು ಬಾರದವರ ಸಮೀಕ್ಷೆ ಆಗಬೇಕು: ಕರ್ಪೋರೇಟ್ ಕನ್ನಡಿಗರ ತಂಡ ನನಗೆ ಸಲಹೆ ನೀಡಿದೆ. ಕನ್ನಡ ಅರ್ಥ ಆಗುತ್ತೆ, ಆದರೆ ಓದಲು- ಬರೆಯಲು ಬರಲ್ಲ ಎನ್ನುವವರ ಸಮೀಕ್ಷೆ ಆಗಬೇಕು. ಕನ್ನಡ ಗೊತ್ತಿಲ್ಲದವರಿಗೆ ೩೦ ದಿನಗಳಲ್ಲಿ ಭಾಷೆ ಕಲಿಸಬೇಕು, ಕನ್ನಡ ಕಲಿತವರಿಗೆ ಜಮೀನು ಆರ್ಟಿಸಿ ಮಾದರಿಯಲ್ಲಿ ಕನ್ನಡ ಪಟ್ಟ ಕೊಡಬೇಕು. ಅದು ಬಿಪಿಎಲ್, ಎಪಿಎಲ್ ಮಾದರಿಯ ದಾಖಲೆ ಆಗಬೇಕು, ಮತ್ತೊಂದು ಸಲಹೆ ಪ್ರತಿಮೆ, ಉದ್ಯಮ ವಿನಿಮಯ ಆಗಬೇಕು. ಹುಬ್ಬಳ್ಳಿ- ಬೆಳಗಾಂ ಪ್ರತಿಭೆ, ಉದ್ಯಮಗಳು ಬೆರೆಯುತ್ತಿವೆ ಮಂಗಳೂರು- ಮೈಸೂರು ನಡುವೆ ಸಾಂಸ್ಕೃತಿಕ ವಿನಿಮಯ ಆಗಬೇಕು.
ರಫ್ತುದಾರರು ಪಕ್ಕದ ರಾಜ್ಯಗಳ ಮೇಲೆ ಅವಲಂಬನೆ ಆಗಿದೆ. ೨೯ ಜಿಲ್ಲೆಗಳನ್ನು ಜೋಡಿಸಿ ಪ್ರತಿಭೆ, ಉದ್ಯಮ ಹಂಚಿಕೊಳ್ಳಬೇಕು ಕೃಷಿಕ- ಕಾರ್ಪೋರೇಟ್ ವಿನಿಮಯ ಆಗಬೇಕು ಎಂದು ಹೇಳಿದರು.