ಧಾರವಾಡ: ಕಿತ್ತೂರು ರಾಣಿ ಚನ್ನಮ್ಮ ಜನ್ಮದಿನದ ಅಂಗವಾಗಿ ಇಂದು ಕಿತ್ತೂರು ರಾಣಿ ಚೆನ್ನಮ್ಮನ ವೀರ ಜ್ಯೋತಿ (ಅ. 19) ಬೆಳಗ್ಗೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಿಂದ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಸ್ವಾಗತಿಸಲಾಯಿತು. ಇದಕ್ಕೂ ಮುನ್ನ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನಿಂದ ಧಾರವಾಡ ಜಿಲ್ಲೆಯ ಹಾರೋಬೆಳವಡಿ ಗ್ರಾಮಕ್ಕೆ ಆಗಮಿಸಿ, ಹಾರೋ ಬೆಳವಡಿ ಮಾರ್ಗವಾಗಿ ಬೆಳಗ್ಗೆ 10-30ಕ್ಕೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಆಗಮಿಸಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ವೀರಜ್ಯೋತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಕಲಾ ತಂಡಗಳೊಂದಿಗೆ ಸ್ವಾಗತಿಸಿದರು. ಕಿತ್ತೂರು ರಾಣಿ ಚನ್ನಮ್ಮನ ಕೆಚ್ಚೆದೆಯ ಜ್ಯೋತಿ ಪೂಜಾ ಕಾರ್ಯಕ್ರಮ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಕುವೆಂಪು ಜಿಲ್ಲಾಧಿಕಾರಿ ಗೀತಾ ಸಿ.ಡಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹಾಗೂ ಸಮಾಜದ ಮುಖಂಡರು, ಗಣ್ಯರು, ಧಾರವಾಡ ಜಿಲ್ಲೆಯ ಎಲ್ಲ ಸಮಾಜ ಬಾಂಧವರು, ಕಿತ್ತೂರು ರಾಣಿ ಚನ್ನಮ್ಮನ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.