ಧಾರವಾಡ : ಜಿಲ್ಲಾ ಪೊಲೀಸ್ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಕುಂದುಕೊರತೆಗಳ ಜಿಲ್ಲಾ ಮಟ್ಟದ ಸಭೆಯನ್ನು ಅ. 22, ರಂದು ಬೆಳಿಗ್ಗೆ 10-30 ಗಂಟೆಗೆ ಜಿಲ್ಲಾ ಪೊಲೀಸ್ ಕಾರ್ಯಾಲಯದ ಸಭಾಭವನದಲ್ಲಿ ನಿಗದಿಪಡಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲೆಯ ಎಲ್ಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮುಖಂಡರು ಈ ಸಭೆಗೆ ಹಾಜರಾಗಬೇಕೆಂದು ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯ ಪ್ರಕಟಣೆ ತಿಳಿಸಿದೆ.