ಬೆಂಗಳೂರು: ಯಾವಾಗಾದ್ರೂ ಸರಿ. ಚರ್ಚೆಗೆ ಸಮಯ ಫಿಕ್ಸ್ ಮಾಡಿ. ನ. ೧ರ ನಂತರ ಯಾವ ದಿನಾಂಕವಾದ್ರೂ ನಿಗದಿಪಡಿಸಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಚರ್ಚೆಗೆ ಒಪ್ಪಿದ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಕೂಡ ಬಹಿರಂಗ ಚರ್ಚೆಗೆ ಒಪ್ಪಿಗೆ ಸೂಚಿಸಿ ಸಮಯ ನಿಗದಿಪಡಿಸುವಂತೆ ಹೇಳಿದ್ದಾರೆ.
ಇಂದು ತಮ್ಮ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಡಿ.ಕೆ ಶಿವಕುಮಾರ್ ಪಟಾಲಮ್ನಿಂದ ರೈತರ ಪರಿಹಾರದಲ್ಲಿ ಲೂಟಿ ಎಂಬ ಹೆಚ್ಡಿಕೆ ಆರೋಪದ ವಿರುದ್ಧ ವಾಗ್ದಾಳಿ ನಡೆಸಿದರು. ಎನೀ ಟೈಮ್ ಚರ್ಚೆಗೆ ಟೈಮ್ ಫಿಕ್ಸ್ ಮಾಡಿ. ನ, ೧ರ ನಂತರ ದಿನಾಂಕ ನಿಗದಿಪಡಿಸಿ. ನಾನು ಏನು ಮಾಡಿದ್ದೇನೆ, ಅವರೇನು ಮಾಡಿದ್ದಾರೆ ಅನ್ನೋದನ್ನು ಅಲ್ಲೇ ಬಿಚ್ಚಿ ಮಾತಾಡೋಣ. ಗಾಳಿಯಲ್ಲಿ ಗುಂಡು ಹೊಡೆಯೋದು, ಹಿಟ್ ಆಂಡ್ ರನ್ ಮಾಡೋದಲ್ಲ ಎಂದು ಕಿಡಿಕಾರಿದರು.