Sunday, April 20, 2025
Google search engine

Homeಅಪರಾಧದೊಡ್ಡಬಳ್ಳಾಪುರ: ಫೋಟೋಶೂಟ್ ವಿಚಾರಕ್ಕೆ ಗಲಾಟೆ- ಯುವಕನ ಕೊಲೆ

ದೊಡ್ಡಬಳ್ಳಾಪುರ: ಫೋಟೋಶೂಟ್ ವಿಚಾರಕ್ಕೆ ಗಲಾಟೆ- ಯುವಕನ ಕೊಲೆ

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ) : ಫೋಟೋಶೂಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ರಾಮೇಶ್ವದ ಬಳಿ ಇರುವ ಡಾಬಾದ ಮುಂಭಾಗದಲ್ಲಿ ಭಾನುವಾರ ಸಂಜೆ

ಘಟನೆಯಲ್ಲಿ ದೊಡ್ಡಬಳ್ಳಾಪುರ ನರಗದ ಕಚೇರಿಪಾಳ್ಯದ ನಿವಾಸಿ ಸೂರ್ಯ (22) ಕೊಲೆಗೀಡಾಗಿದ್ದಾನೆ.

ಮೃತ ಯುವಕ ಐಟಿಐ ವಿದ್ಯಾರ್ಥಿಯಾಗಿದ್ದು, ದೀಪಾವಳಿಯ ರಜೆ ಹಿನ್ನೆಲೆ ಫೋಟೋಶೂಟ್ ಗಾಗಿ ಹೋಗಿದ್ದ ವೇಳೆ ಯುವಕರ ಮತ್ತೊಂದು ಗುಂಪು ಫೋಟೋ ತೆಗೆಯುವಂತೆ ಕಿರಿಕ್ ತೆಗೆದಿದೆ. ಈ ಗಲಾಟೆಯಲ್ಲಿ ಅಪರಿಚಿತ ಗ್ಯಾಂಗ್ ನಲ್ಲಿದ್ದ ಯುವಕನೊಬ್ಬ ಸೂರ್ಯನ ಎದೆಗೆ ಚಾಕುವಿನಿಂದ ಇರಿದಿದ್ದಾನೆ. ಗಾಯಗೊಂಡಿದ್ದ ಸೂರ್ಯನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ತೀವ್ರ ರಕ್ತಸ್ರಾವದಿಂದ ಸೂರ್ಯ ಸಾವನ್ನಪ್ಪಿದ್ದಾನೆ.

ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular