Monday, April 21, 2025
Google search engine

Homeಅಪರಾಧಜಗಳ ಬಿಡಿಸಲು ಬಂದ ಪೊಲೀಸರ 112 ವಾಹನದಲ್ಲಿ ವ್ಯಕ್ತಿ ಪರಾರಿ:  ಆರೋಪಿ ವಶಕ್ಕೆ

ಜಗಳ ಬಿಡಿಸಲು ಬಂದ ಪೊಲೀಸರ 112 ವಾಹನದಲ್ಲಿ ವ್ಯಕ್ತಿ ಪರಾರಿ:  ಆರೋಪಿ ವಶಕ್ಕೆ

ತುಮಕೂರು: ಸಹೋದರರಿಬ್ಬ ಜಗಳ ಬಿಡಿಸಲು ಹೋದ ಪೊಲೀಸರ 112 ವಾಹನವನ್ನೇ ಓಡಿಸಿಕೊಂಡು ವ್ಯಕ್ತಿ ಪರಾರಿಯಾದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಾರಾನಹಳ್ಳಿಯಲ್ಲಿ  ನಡೆದಿದೆ.

ಮುನಿಯ 112 ವಾಹನವನ್ನು ಓಡಿಸಿಕೊಂಡು‌ ಹೋಗಿದ್ದ ಆರೋಪಿ.

ಸಿ.ಎಸ್ ಪುರ ಪೊಲೀಸ್ ಠಾಣೆಯ ವ್ಯಾಪ್ತಿಯ ನಾರಾನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಸಹೋದರಿಬ್ಬರ ನಡುವೆ ಗಲಾಟೆ ಆಗ್ತಿತ್ತು. ಈ ವೇಳೆ ಆರೋಪಿ ಸಹೋದರ 112 ಗೆ ಕರೆ ಮಾಡಿದ್ದ. ಜಗಳ ಬಿಡಿಸಲು ಗ್ರಾಮಕ್ಕೆ 112 ವಾಹನದಲ್ಲಿ‌ ಪೊಲೀಸರು ಬಂದಿದ್ದರು. ಈ ವೇಳೆ ಮುನಿಯ 112 ವಾಹನದ ಹಿಂಬದಿಯ ಗಾಜು ಒಡೆದಿದ್ದ. ಕಾರು ನಿಲ್ಲಿಸಿ ಹಿಂಬದಿಯ ಗಾಜು‌ ನೋಡಲು ಪೊಲೀಸರು ಹೋದ ವೇಳೆ ಕಾರನ್ನು ವೇಗವಾಗಿ ಓಡಿಸಿಕೊಂಡು ಎಸ್ಕೇಪ್ ಆಗಿದ್ದಾನೆ.

ಸತತ ಮೂರು ಗಂಟೆಗಳ ಕಾಲ ಹುಡುಕಾಟ ನಡೆಸಿದ ಪೊಲೀಸರು ತುಮಕೂರು ತಾಲೂಕಿನ ಹೆಬ್ಬೂರು ಬಳಿ 112 ವಾಹನವನ್ನು ಪತ್ತೆ ಹಚ್ಚಿದ್ದಾರೆ.

ಬಳಿಕ ಆರೋಪಿಯನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದು, ಹೆಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular