Tuesday, April 22, 2025
Google search engine

Homeಸ್ಥಳೀಯಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಮೈಸೂರಿನಲ್ಲಿ 2 ಕ್ಲಿನಿಕ್ ಗಳಿಗೆ ಬೀಗ

ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಮೈಸೂರಿನಲ್ಲಿ 2 ಕ್ಲಿನಿಕ್ ಗಳಿಗೆ ಬೀಗ

ಮೈಸೂರು: ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಕುರಿತು ಮೈಸೂರಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಿದ್ದು, ಜಿಲ್ಲೆಯ ಸರಗೂರಿನಲ್ಲಿರುವ ಎರಡು ಕ್ಲಿನಿಕ್ ಗಳಿಗೆ ಬೀಗ ಜಡಿದಿದ್ದಾರೆ.

ಎಚ್.ಡಿ ಕೋಟೆ ತಾಲೂಕು ಆರೋಗ್ಯಾಧಿಕಾರಿ ಡಾ.ರವಿ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಕೆಪಿಎಂಇಎ ಕಾಯ್ದೆಡಿ ನೊಂದಣಿಯಾಗದ ಕ್ಲಿನಿಕ್ ಗಳಿಗೆ ಬೀಗ ಹಾಕಿಸಲಾಯಿತು.

ಸರಗೂರಿನಲ್ಲಿರುವ ಗುರು ಕ್ಲಿನಿಕ್ ನೊಂದಣಿಯಾಗಿರಲಿಲ್ಲ, ದರ್ಶನ್ ಕ್ಲಿನಿಕ್ ನೋಂದಣಿ ನವೀಕರಣ ಮಾಡಿಸರಲಿಲ್ಲ ಎಂಬ ಕಾರಣಕ್ಕೆ ಕ್ಲಿನಿಕ್ ನವರಿಗೆ ನೋಟಿಸ್ ನೀಡಿ ಬೀಗ ಹಾಕಿಸಲಾಗಿದೆ.

ಈಗಾಗಲೇ ಮೈಸೂರಿನಲ್ಲಿ ಕ್ಲಿನಿಕ್‌ ಹಾಗೂ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಆರೋಗ್ಯಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಸ್ವಚ್ಛತೆ ಕಾಪಾಡಿಕೊಳ್ಳದ ಕಾರಣಕ್ಕೆ ದುರ್ಗ ಕ್ಲಿನಿಕ್ ಗೆ ನೋಟಿಸ್ ನೀಡಲಾಗಿದೆ.

RELATED ARTICLES
- Advertisment -
Google search engine

Most Popular