Monday, July 7, 2025
Google search engine

HomeUncategorizedರಾಷ್ಟ್ರೀಯತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆಸಿಆರ್ ಆಸ್ಪತ್ರೆಗೆ ದಾಖಲು

ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆಸಿಆರ್ ಆಸ್ಪತ್ರೆಗೆ ದಾಖಲು

ಹೈದರಾಬಾದ್: ಕಾಲು ಜಾರಿ ಬಿದ್ದು ಗಾಯಗೊಂಡಿರುವ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ ಎಸ್) ಅಧ್ಯಕ್ಷ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರ್ರವಳ್ಳಿ ಫಾರ್ಮ್ ಹೌಸ್ ನಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡ ಅವರನ್ನು ಗುರುವಾರ ಮಧ್ಯರಾತ್ರಿ ಸೋಮಾಜಿಗುಡ ಯಶೋದಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ವೈದ್ಯರ ತಪಾಸಣೆ ಬಳಿಕ ಸೊಂಟದ ಮೂಳೆ ಮುರಿತಕ್ಕೆ ಒಳಗಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನಷ್ಟು ಪರೀಕ್ಷೆ ನಡೆಸಲು ಬಾಕಿ ಇದ್ದು ಆ ಬಳಿಕ ಶಸ್ತ್ರಚಿಕಿತ್ಸೆಯ ಅಗ್ಯತ್ಯದ ಕುರಿತು ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.

ಸದ್ಯ ಆಸ್ಪತ್ರೆಯಲ್ಲಿ ಚಂದ್ರಶೇಖರ ರಾವ್ ಕುಟುಂಬ ಸದಸ್ಯರು ಇದ್ದಾರೆ.

“ಬಿಆರ್ ಎಸ್ ಅಧ್ಯಕ್ಷ ಕೆಸಿಆರ್ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ತಜ್ಞರ ಆರೈಕೆಯಲ್ಲಿದ್ದಾರೆ. ಹಿತೈಷಿಗಳ ಬೆಂಬಲ ಹಾಗೂ ಹಾರೈಕೆಯೊಂದಿಗೆ ಶೀಘ್ರದಲ್ಲಿ ಸಂಪೂರ್ಣವಾಗಿ ಗುಣಮುಖರಾಗಲಿದ್ದಾರೆ” ಎಂದು ಎಂಎಲ್ ಸಿ ಕೆ ಕವಿತಾ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular