Monday, April 21, 2025
Google search engine

Homeರಾಜ್ಯಸುದ್ದಿಜಾಲಪಿ.ಸಿ.ಪಿ.ಡಿ.ಎನ್ ಟಿ ಕಾಯ್ದೆ ಜಿಲ್ಲಾ ಸಲಹಾ ಮತ್ತು ಪರಿಶೀಲನಾ ಸಮಿತಿ ಸಭೆ

ಪಿ.ಸಿ.ಪಿ.ಡಿ.ಎನ್ ಟಿ ಕಾಯ್ದೆ ಜಿಲ್ಲಾ ಸಲಹಾ ಮತ್ತು ಪರಿಶೀಲನಾ ಸಮಿತಿ ಸಭೆ

ಮಂಡ್ಯ: ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ತಡೆ ಕಾಯ್ದೆ ಜಿಲ್ಲಾ ಸಲಹ ಸಮಿತಿ ಸಭೆ ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮೋಹನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಇತ್ತೀಚೆಗೆ ತಪಾಸಣಾ ತಂಡ ಜಿಲ್ಲೆಯಲ್ಲಿ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಗ್ಗೆ ಚರ್ಚಿಸಲಾಯಿತು. ಸ್ಕ್ಯಾನಿಂಗ್ ಸೆಂಟರ್ ಗಳು ಕಾಯ್ದೆಯಲ್ಲಿ ತಿಳಿಸಿರುವ ರೀತಿ ದಾಖಲೆಗಳನ್ನು ಕನಿಷ್ಠ ಎರಡು ವಷ ಸಂಗ್ರಹಿಸಿಡಬೇಕು. ಮೂರು ತಿಂಗಳ ಮೇಲ್ಪಟ್ಟು ಹಾಗೂ ೬ ತಿಂಗಳವರಗಿನ ಗರ್ಭಿಣಿಯರು ಸ್ಕ್ಯಾನಿಂಗ್ ಒಳಪಟ್ಟಿರುವವರ ದಾಖಲೆಗಳನ್ನು ತಪಸಣಾ ತಂಡ ಆದ್ಯತೆಯ ಮೇಲೆ ಪರಿಶೀಲಿಸಬೇಕು ಎಂದು ಡಿ.ಹೆಚ್ ಒ ಡಾ: ಮೋಹನ್ ತಿಳಿಸಿದರು.

ಸ್ಕ್ಯಾನಿಂಗ್ ಸೆಂಟರ್ ಗಳನ್ನು ಉಪವಿಭಾಗಾಧಿಕಾರಿ ಗಳ ಅಧ್ಯಕ್ಷತೆಯಲ್ಲಿ ಪರಿಶೀಲನೆ ನಡೆಸಿದಾಗ, ಮಾಹಿತಿ ಬೋಡ್೯ ಗಳ ಅನಾವರಣವನ್ನು ಸಾರ್ವಜನಿಕರಿಗೆ ಗೋಚರಿಸುವಂತೆ ಹಾಕಲು ತಿಳಿಸಿ ಎಂದರು. ಒಪ್ಪಿಕೊಳ್ಳಲು ಸಾಧ್ಯವಿಲ್ಲದ ಕಾರಣಗಳು ನೀಡಿ ನೇರವಾಗಿ ಮೂರು ಅಥವಾ ನಾಲ್ಕು ತಿಂಗಳ ನಂತರ ಗಭಿರ್ಣಿಯರು ವೈದ್ಯರ ಬಳಿ ತಪಾಸಣೆಗೆ ಒಳಪಡುವವರ ಬಗ್ಗೆ ಮಾಹಿತಿ ನೀಡಿದರೆ ವಿಶೇಷ ನಿಗಾ ವಹಿಸಿ ಪರಿಶೀಲನೆ ನಡೆಸಲಾಗುವುದು ಎಂದರು. ಸಭೆsಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ: ಬೆಟ್ಟಸ್ವಾಮಿ, ವಿನಾಯಕ ನಸಿಂಗ್ ಹೋಂ ನ ಡಾ: ವಸುಮತಿ ರಾವ್ , ಮಕ್ಕಳ ತಜ್ಞ ಡಾ: ಗೋಪಾಲಕೃಷ್ಣ ಗುಪ್ತ, ರೆಡಿಯೋಲಾಜಿಸ್ಟ್ ಡಾ: ನಿತೇಶ್ ಶ್ರೀನಿವಾಸ್, ಡಾ: ಮನೋಹರ್, ಸಮಾಜ ಸೇವಕಿ ಪೂರ್ಣಿಮಾ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular