ತುಮಕೂರು: ತುಮಕೂರಿನ ಕುಣಿಗಲ್ ತಾಲೂಕಿನ ಕಿತ್ತಾನಮಂಗಲ ಕೆರೆಯಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಪತ್ತೆಯಾಗಿದೆ.
ರಂಜಿತಾ ಎಂಬ ಮಹಿಳೆಯ ಕಳೆಬರ ಎಂಬ ಶಂಕೆ ವ್ಯಕ್ತವಾಗಿದೆ.
ಕಳೆದ ೬ ತಿಂಗಳ ಹಿಂದೆ ಕಲ್ಲಿಪಾಳ್ಯ ಗ್ರಾಮದ ಮಹಿಳೆ ರಂಜಿತಾ ನಾಪತ್ತೆಯಾಗಿದ್ದರು.
ಅಸ್ಥಿಪಂಜರದ ಬಳಿ ಕಾಲು ಚೈನ್, ನೈಟಿ, ಕೈಬಳೆಗಳು ಪತ್ತೆಯಾಗಿದೆ. ಅಸ್ಥಿಪಂಜರವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಪೊಲೀಸರು ಕಳುಹಿಸಿದ್ದಾರೆ.
ಕುಣಿಗಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.