ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಬಿದ್ದು ಇಂಜಿನಿಯರ್ ಮೃತಪಟ್ಟ ಘಟನೆ ಕೆ.ಆರ್ ಪುರದ ಅಯ್ಯಪ್ಪನಗರದಲ್ಲಿ ನಡೆದಿದೆ.
ಘಟನೆ ನಿನ್ನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದ ದಿಪಾಂಶು ಶರ್ಮಾ ಎಂಬುವವರು ಅಪಾರ್ಟ್ಮೆಂಟ್ನ 33ನೇ ಫ್ಲೋರ್ನ ಬಾಲ್ಕನಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ).
ಘಟನೆ ಸಂಬಂಧ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರುವಾರ ರಾತ್ರಿ ಕಂಠ ಪೂರ್ತಿ ಕುಡಿದು ಪಾರ್ಟಿ ಮಾಡಿ ಶುಕ್ರವಾರ ಬೆಳಗ್ಗೆ 6:45ರ ವೇಳೆ ತನ್ನ ಮನೆಗೆ ಹಿಂತಿರುಗಿದ್ದ ದಿಪಾಂಶು ಶರ್ಮಾ ತನ್ನ ಅಪಾರ್ಟ್ ಮೆಂಟ್ ನ 33ನೇ ಫ್ಲೋರ್ ನ ಬಾಲ್ಕನಿಗೆ ತೆರಳಿದ್ದಾರೆ. ಈ ವೇಳೆ ಮದ್ಯದ ನಶೆಯಲ್ಲೇ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.
ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.