Sunday, April 20, 2025
Google search engine

Homeಅಪರಾಧಬಸ್, ಜೀಪ್ ನಡುವೆ ಭೀಕರ ಅಪಘಾತ: ನಾಲ್ವರು ಸಾವು

ಬಸ್, ಜೀಪ್ ನಡುವೆ ಭೀಕರ ಅಪಘಾತ: ನಾಲ್ವರು ಸಾವು

ಹುಣಸೂರು : ಪಟ್ಟಣದ ಆರ್‌ಟಿಒ ಕಚೇರಿ ಬಳಿ ಕೆಎಸ್‌ಆರ್‌ಟಿಸಿ ಎಲೆಕ್ಟ್ರಿಕ್ ಬಸ್ ಹಾಗೂ ಜೀಪ್ ನಡುವೆ ನಿನ್ನೆ ಡಿಕ್ಕಿಯಾಗಿ ಜೀಪ್‌ನಲ್ಲಿದ್ದ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಎಚ್.ಡಿ ಕೋಟೆ ತಾಲ್ಲೂಕಿನ ಚಿಲ್ಲರಮರದ ತಿಟ್ಟು ಗ್ರಾಮದ ನಿವಾಸಿಗಳಾದ ಸೋಮೇಶ (೩೦), ಲೋಕೇಶ (೩೫), ರಾಜು (೩೫) ಹಾಗೂ ದಮ್ಮನಕಟ್ಟೆ ನಿವಾಸಿ ಜೀಪ್ ಚಾಲಕ ಮೃತಪಟ್ಟಿದ್ದಾರೆ.

ವಿರಾಜಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹಾಗೂ ಹುಣಸೂರಿನಿಂದ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ಜೀಪ್ ಡಿಕ್ಕಿ ಆಗಿವೆ. ಡಿಕ್ಕಿಯ ರಭಸಕ್ಕೆ ಜೀಪ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಹುಣಸೂರು ಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular