ಮಡಿಕೇರಿ : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ನಾಳೆ ಜ, ೧೮ ರಂದು ಮಧ್ಯಾಹ್ನ ೨ ಗಂಟೆಯ ನಂತರ ಸ್ವಚ್ಛತಾ ಕಾರ್ಯದ ಪ್ರಯುಕ್ತ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸುವಂತೆ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ. ಅವರು ತಿಳಿಸಿದ್ದಾರೆ.