ಬೆಳಗಾವಿ: ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ ವಿಶಾಲವಾದ ಜಾಗದಲ್ಲಿ ನಿರ್ಮಿಸಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ರಾಯಣ್ಣನ ಕೆಚ್ಚೆದೆಯ ಬದುಕನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ (ಜ.) 17ರಂದು ಲೋಕಾರ್ಪಣೆ ಮಾಡಿದರು.
ಬೆಳಗಾವಿ ಜಿಲ್ಲಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಲಾಗಿತ್ತು. ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ, ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ಸಂಗೊಳ್ಳಿ ಹಿರೇಮಠ ಗುರು ಸಿದ್ದಲಿಂಗೇಶ್ವರ ಸಂಸ್ಥಾನದ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ನಗರಾಭಿವೃದ್ಧಿ ಸಚಿವ ಸುರೇಶ ಬಿ.ಎಸ್.ಸರಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಶಾಸಕ ಆಸೀಫ್ ಸೇಠ್, ಗಣೇಶ ಹುಕ್ಕೇರಿ, ಬಾಬಾಸಾಹೇಬ ಪಾಟೀಲ, ಮಹೇಂದ್ರ. ತಮ್ಮಣ್ಣವರ, ವಿಶ್ವಾಸ ವೈದ್ಯ, ಮಾಜಿ ಸಚಿವ ಎಚ್.ವೈ.ಮೇಟಿ, ಎಚ್.ಎಂ.ರೇವಣ್ಣ ಸೇರಿದಂತೆ ಹಲವು ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೈನಿಕ ಶಾಲೆಯ ವಿದ್ಯಾರ್ಥಿಗಳೊಂದಿಗೆ ಛಾಯಾಚಿತ್ರ ತೆಗೆಸಿ ಶುಭ ಹಾರೈಸಿದರು.
ಸಂಗೊಳ್ಳಿ ರಾಯಣ್ಣನ ಶೌರ್ಯ ಭೂಮಿ: ಕಿತ್ತೂರು ಸಂಸ್ಥೆಯಲ್ಲಿ ಸಂಗೊಳ್ಳಿ ರಾಯಣ್ಣನ ಶೌರ್ಯದಲ್ಲಿ ರೋಗಣ್ಣನ ತಂದೆ ಭರಮಪ್ಪ ಹುಲಿಯೊಂದಿಗೆ ಕಾಳಗ: ಭರಮಪ್ಪನ ಸಾಹಸಕ್ಕೆ ಮೆಚ್ಚಿ ರಾಜ ಮಲ್ಲಸರ್ಜ ರಕ್ತಸಿಕ್ತ ಭೂಮಿ ನೀಡುವ ದೃಶ್ಯ. ಭರಮಪ್ಪ ಮತ್ತು ಕೆಂಚಮ್ಮ ದಂಪತಿಗೆ ಜನಿಸಿದ ಮಗುವಿಗೆ ರಾಯಣ್ಣ, ತರುಣ ರಾಯಣ್ಣ ಎಂದು ನಾಮಕರಣ ಮಾಡುವ ದೃಶ್ಯ ಕುಸ್ತಿ ಕಣದಲ್ಲಿ ಆಟವಾಡಿ ಗೆದ್ದಿತು, ಕುಸ್ತಿಯಲ್ಲಿ ಗೆಲ್ಲದ ರಾಯಣ್ಣನಿಗೆ ಖಡ್ಗ ನೀಡಿದ ರಾಜ, ಕಿತ್ತೂರು ರಾಣಿ ಚೆನ್ಮಮ್ಮನ ಆಸ್ಥಾನ; ಬ್ರಿಟಿಷರೊಂದಿಗೆ ಮೊದಲ ಆಂಗ್ಲೋ-ಕಿತ್ತೂರು ಯುದ್ಧ, ಹೀಗೆ ಬಾಲ್ಯದಿಂದ ಕೊನೆಯವರೆಗೂ ರಾಯಣ್ಣನ ಕಾಳಗದ ದೃಶ್ಯಗಳು ಶಿಲ್ಪವನದಲ್ಲಿ ಜೀವ ತುಂಬಿವೆ.
