Sunday, April 20, 2025
Google search engine

Homeರಾಜ್ಯಸುದ್ದಿಜಾಲಕೆ.ಆರ್.ನಗರ: ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾದ ಶ್ರೀ ರಾಮದೇವರ ತೆಪ್ಪೋತ್ಸವ

ಕೆ.ಆರ್.ನಗರ: ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾದ ಶ್ರೀ ರಾಮದೇವರ ತೆಪ್ಪೋತ್ಸವ

ವರದಿ:ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ
: ಬಾನೆತ್ತರದಲ್ಲಿ ಪಟಾಕಿ ಸದ್ದು. . . ಇದರ ನಡುವೆ ದೇವಾಲಯದಿಂದ ಉತ್ಸವ ಮೂರ್ತಿಯನ್ನು ಹೊತ್ತು ತಂದ ಭಕ್ತಾದಿಗಳು … ಅಲಂಕೃತಗೊಂಡಿದ್ದ ಮಂಟಪದಲ್ಲಿ ಪ್ರತಿಷ್ಠಾಪನೆಗೊಂಡ ಸೀತಾರಾಮ ಲಕ್ಷ್ಮಣ … ನದಿಯಲ್ಲಿ ಮೂರು ಸುತ್ತು ಸುತ್ತಿದ ಉತ್ಸವ ಮೂರ್ತಿಗಳು… ದೇವಲೋಕವೇ ಧರೆಗೆ ಬಂದ ಅನುಭವ … ಈ ಇಂತಹ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾದ ಸಾವಿರಾರು ಮಂದಿ. . .
ಇದು ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆಯ ಕಾವೇರಿ ನದಿಯಲ್ಲಿ ಗುರುವಾರ ರಾತ್ರಿ ಪುರಾಣ ಪ್ರಸಿದ್ದವಾಗಿರುವ ಶ್ರೀ ರಾಮದೇವರ ತೆಪ್ಪೋತ್ಸವದಲ್ಲಿ ಕಂಡು ಬಂದ ದೃಶ್ಯಗಳು.
ಇಲ್ಲಿನ ಶ್ರೀ ರಾಮದೇವರ ದೇವಾಲಯದಿಂದ ಶ್ರೀ ರಾಮ, ಲಕ್ಷಣ, ಸೀತಾಮಾತೆ ದೇವರುಗಳ ಉತ್ಸವ ಮೂರ್ತಿಗಳನ್ನು ಪಟಾಕಿ ಸಿಡಿಸುವ ಮೂಲಕ ಅದ್ದೂರಿ ಮೆರವಣಿಗೆ ಮೂಲಕ ಕಾವೇರಿ ನದಿಯ ದಡದಲ್ಲಿ ದೇವಾಲಯದ ಸಮೀಪವಿರುವ ಆಂಜನೇಯ ಗುಡಿಯ ಬಳಿ ವರ್ಣರಂಜಿತ ವಿದ್ಯುತ್ ಲೈಟ್‌ಗಳು ಮತ್ತು ಹೂವಿನ ಅಲಂಕಾರಗಳಿಂದ ಶೃಂಗಾರಗೊಂಡಿದ್ದ ತೆಪ್ಪದಲ್ಲಿ ಪ್ರತಿಷ್ಠಾಪಿಸಲಾಯಿತು.
ಅನಂತರ ತೆಪ್ಪದಲ್ಲಿ ದೇವರ ಉತ್ಸವ ಮೂರ್ತಿಗಳನ್ನು ರಾತ್ರಿ 8.30 ರ ಸಮಯದಲ್ಲಿ ಕಾವೇರಿ ನದಿಯ ಮಧ್ಯ ಭಾಗಕ್ಕೆ ತೆಗೆದುಕೊಂಡು ಹೋಗಿ ೩ ಭಾರಿ ತಿರುಗಿಸುತ್ತಿದ್ದಂತೆಯೇ ನದಿಯ ದಡದಲ್ಲಿ ನೆರೆದಿದ್ದ ಸಾವಿರಾರು ಭಕ್ತಾಧಿಗಳು ಶ್ರೀ ರಾಮನಿಗೆ ಜೈಕಾರ, ಶ್ರೀರಮಣನ ಗೋವಿಂದಾ ಗೋವಿಂದಾ ಎಂಬ ಘೋಷಣೆಗಳನ್ನು ಮೊಳಗಿಸಿದಾಗ ದೇವಲೋಕವೇ ಧರೆಗೆ ಬಂದಂತೆ ಭಾಸವಾಯಿತು.
ಕಾವೇರಿ ನದಿಯಲ್ಲಿ ಸುತ್ತಿ ಬಂದ ಶ್ರೀರಾಮ, ಲಕ್ಷಣ, ಸೀತಾ ದೇವರುಗಳ ಉತ್ಸವ ಮೂರ್ತಿಗಳನ್ನು ಭಕ್ತಾಧಿಗಳು ಚಪ್ಪಾಳೆ ತಟ್ಟುವ ಮೂಲಕ ಸ್ವಾಗತಿಸಿ ಪೂಜಾ ಕೈಂಕರ್ಯಗಳನ್ನು ಕೈಗೊಂಡು ತಮ್ಮ ಇಷ್ಟಾರ್ಥವನ್ನು ಈಡೇರುವಂತೆ ಪ್ರಾರ್ಥಿಸಿಕೊಂಡರು. ಆನಂತರ ಉತ್ಸವ ಮೂರ್ತಿಗಳನ್ನು ಮತ್ತೆ ದೇವಾಲಯಕ್ಕೆ ಒತ್ತು ತರಲಾಯಿತು.
ಈ ಬಾರಿ ತೆಪ್ಪೋತ್ಸವಕ್ಕೆ ಸಾಲಿಗ್ರಾಮದ ಮಾಜಿ ಗ್ರಾ.ಪಂ.ಸದಸ್ಯ ಗುರುಪ್ರಸಾದ್ ಅವರು ಹೂವಿನ ಆಲಂಕಾರ ಮಾಡಿಸಿದ್ದು ಮತ್ತು ಗುಂಡ್ಲುಪೇಟೆಯ ರತ್ನಮ್ಮ ಮಹದೇವದೇವ ನಾಯಕ, ಆನಂದ್ ಅವರು ಭಾರಿ ಪಟಾಕಿಗಳನ್ನು ಸಿಡಿಸುವ ಮೂಲಕ ತೆಪ್ಪೋತ್ಸವಕ್ಕೆ ಕಳೆತಂದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಪೂರ್ಣಿಮಾ, ಶಿರಸ್ತೆದಾರ್ ಮೇಲೂರು ಶಿವಕುಮಾರ್, ಉಪತಹಸೀಲ್ದಾರ್ ಕೆ.ಜೆ.ಶರತ್ ಕುಮಾರ್, ಆರ್,ಐ ಚಿದನಂದಬಾಬು, ವಿ.ಎ.ಗಳಾದ ಮೌನೇಶ್, ಕಾವೇರಿ,ಪ್ರಿಯಾ,
ದೇವಾಲಯದ ಇಓ ಕೆ.ರಘು, ಪಾರುಪತ್ತೆದಾರ್ ಯತಿರಾಜ್, ಪವನ್, ದೇವಾಲಯದ ಅರ್ಚಕರಾದ ನಾರಾಯಣ ಅಯ್ಯಂಗಾರ್, ವಾಸುದೇವನ್ ಸೇರಿದಂತೆ 5 ಸಾವಿರಕ್ಕೂ ಹೆಚ್ಚು ಮಂದಿ ಭಕ್ತಾದಿಗಳು ಭಾಗವಹಿಸಿದ್ದರು.
ಮುನ್ನೆಚ್ಚರಿಕೆ ಕ್ರಮವಾಗಿ ಸಾಲಿಗ್ರಾಮ ಠಾಣೆ ಮತ್ತು‌ ಚುಂಚನಕಟ್ಟೆ ಉಪ ಪೊಲೀಸ್ ಠಾಣೆಯ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.

1) ಗುರುವಾರ ರಾತ್ರಿ ನಡೆದ ಚುಂಚನಕಟ್ಟೆಯ ಶ್ರೀರಾಮ ದೇವರ ತೆಪ್ಪೋತ್ಸವದಲ್ಲಿ‌ ತಹಸೀಲ್ದಾರ್ ಪೂರ್ಣಿಮಾ ಮತ್ತು ಸಾಲಿಗ್ರಾಮ ತಾಲೂಕು ಕಚೇರಿ ಶಿರಸ್ತೆದಾರ್ ಮೇಲೂರು ಶಿವಕುಮಾರ್ ತೆಪ್ಪದಲ್ಲಿ ಕೂರುವ ಮೂಲಕ ನದಿ ಮಧ್ಯಕ್ಕೆ ತೆರಳಿ ತೆಪ್ಪ ನೆಡಸುವರಿಗೆ ಧೈರ್ಯ ತಂದು ಕೊಟ್ಟರು ಜನರ ಮೆಚ್ಚುಗೆಗೆ ಪಾತ್ರರಾದರು.

2) ಚುಂಚನಕಟ್ಟೆಯಲ್ಲಿ ನಡೆದ ಶ್ರೀರಾಮ ದೇವರ ತೆಪ್ಪೋತ್ಸವಕ್ಕೆ ಆಗಮಿಸಿದ ಭಕ್ತಾಧಿಗಳಿಗೆ ಪ್ರಸಾದ ವಿತರಣೆಗೆ ದೇವಾಲಯದ ಆಡಳಿತ ಮಂಡಳಿ ನಿರ್ಲಕ್ಷ್ಯ ತೋರಿತು .ಹಿಂದಿನಿಂದಲು ಈ ಕಾರ್ಯಕ್ರಮದ ದಿನ ಭಕ್ತಾಧಿಗಳಿಗೆ ಪ್ರಸಾಪ ವಿತರಣೆ ಮಾಡಿ ಎಂದು ಭಕ್ತಾಧಿಗಳು ತಾಲೂಕು ಮತ್ತು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು. ಈ ಬಾರಿಯೂ ಪ್ರಯೋಜನವಾಗಿಲ್ಲ ಭಕ್ತಾಧಿಗಳು ನೀಡುವ ಕಾಣಿಕೆ ಹಣವನ್ನು ಏನು ಮಾಡಲಾಗುತ್ತಿದೆ ಎಂದು ಗೊಣಗಿಕೊಂಡು ಹೋಗುತ್ತಿದ್ದಿದು ಕಂಡುಬಂತು.


RELATED ARTICLES
- Advertisment -
Google search engine

Most Popular