ರಾಮನಗರ: ಇದೇ ಜನವರಿ ೨೬ ರಿಂದ ಫೆಬ್ರವರಿ ೨೪ರ ವರೆಗೆ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಹಕಾಧಿಕಾರಿ ನಿರ್ವಹಕಾಧಿಕಾರಿ ದಿಗ್ವಿಜಯ್ ಬೋಡ್ಕೆ ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ನಡೆದ ಸಂವಿಧಾನ ದಿನಾಚರಣೆಯ ಪ್ರಯುಕ್ತರಾಷ್ಟ್ರೀಯ ಮಟ್ಟದ ಸಮ್ಮೇಳನದ ಅಂಗವಾಗಿ ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳುವ ಸಂಬಂಧಕರೆಯಲಾದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ನಿರ್ದೇಶನದಂತೆ ಸಂವಿಧಾನ ಜಾಗೃತಿ ಜಾಥಾ ಸ್ಥಬ್ದ ಚಿತ್ರವು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಲಿದೆ.ಸಂವಿಧಾನ ಮೌಲ್ಯಗಳು ಮತ್ತು ಆಶಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಜಾಥಾದ ಉದ್ದೇಶ ಎಂದು ಹೇಳಿದ ಅವರುಜಾಥಾಕ್ಕೆ ಜನವರಿ ೨೬ ರಂದು ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡುವರು.ಜನವರಿ ೨೬ ರಿಂದ ಆರಂಭವಾಗುವ ಜಾಥಾ ಫೆಬ್ರವರಿ ೨೩ರವರಿಗೆ ನಡೆಯಲಿದೆಎಂದರು.
ಕಾರ್ಯಕ್ರಮಕ್ಕೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ ಜಾಥಾದ ವ್ಯವಸ್ಥೆಕುರಿತು ನಿಗಾ ವಹಿಸುವಂತೆ ಸೂಚಿಸಲಾಗಿದೆ. ಸ್ಥಬ್ದ ಚಿತ್ರದಲ್ಲಿಡಾ. ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಪರಿಕಲ್ಪನೆ, ಅವರ ಪ್ರತಿಮೆ, ಕ್ಷೇತ್ರದ ಪ್ರಮುಖ ವ್ಯಕ್ತಿಗಳ ಮಾಹಿತಿ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಸರ್ಕಾರದ ಐದು ಯೋಜನೆಗಳನ್ನು ಸ್ಥಬ್ದ ಚಿತ್ರದಲ್ಲಿ ಅಳವಡಿಸಲಾಗುವುದು ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಅಲ್ಲಿ ಸಂವಿಧಾನದಕುರಿತು ಅರಿವು ಮೂಡಿಸಲಾಗುವುದಲ್ಲದೆ, ಪಂಚಾಯಿತಿ ವತಿಯಿಂದ ಪ್ರಬಂಧ, ಚಿತ್ರಕಲೆ, ಭಾಷಣ ಸ್ಪರ್ಧೆ ಸೇರಿದಂತೆ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು. ಸಭೆಯಲ್ಲಿ ಉಪ ಕಾರ್ಯದರ್ಶಿ ಚಿಕ್ಕಸುಬ್ಬಯ್ಯ, ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕ ಶಾಂತಿಪ್ರಿಯಾ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳು ಅಧ್ಯಕ್ಷರು, ಪದಾಧಿಕಾರಿಗಳು ಆದ ಶಿವಕುಮಾರಸ್ವಾಮಿ, ಶಿವಕುಮಾರ್, ಶಿವಪ್ರಕಾಶ್ , ಸಂಪಾದಕ ಚಲುವರಾಜು, ಗುಡ್ಡೆ ವೆಂಕಟೇಶ್, ದೊಡ್ಡಯ್ಯ, ಕೃಷ್ಣಮೂರ್ತಿ, ವಾಸು, ಮಲ್ಲಿಕಾರ್ಜುನ್, ರಮೇಶ್, ಶೇಖರ್, ಹರೀಶ್ ಬಾಲು ಹಾಗೂ ಇತರರು ಹಾಜರಿದ್ದರು.