Monday, April 21, 2025
Google search engine

Homeರಾಜಕೀಯಅಂಗನವಾಡಿ ಕೇಂದ್ರಗಳಿಗೆ ಬಾಡಿಗೆ ಕಟ್ಟಲು ಯೋಗ್ಯತೆ ಇಲ್ಲದ ಸರ್ಕಾರ: ಆರ್.ಅಶೋಕ್  

ಅಂಗನವಾಡಿ ಕೇಂದ್ರಗಳಿಗೆ ಬಾಡಿಗೆ ಕಟ್ಟಲು ಯೋಗ್ಯತೆ ಇಲ್ಲದ ಸರ್ಕಾರ: ಆರ್.ಅಶೋಕ್  

ರಾಯಚೂರು: ಅಂಗನವಾಡಿ ಕೇಂದ್ರಗಳಿಗೆ ಬಾಡಿಗೆ ಕಟ್ಟಲು ಯೋಗ್ಯತೆ ಇಲ್ಲದ ಸರ್ಕಾರ ಇದ್ದರೆಷ್ಟು ಸತ್ತರೆಷ್ಟು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ 2856 ಅಂಗನವಾಡಿ ಕೇಂದ್ರಗಳ ಪೈಕಿ ಒಟ್ಟು 808 ಬಾಡಿಗೆ ಕಟ್ಟಡಗಳ ಕೋಟ್ಯಂತರ ರೂಪಾಯಿ ಬಾಡಿಗೆಯನ್ನು ಬಿಡುಗಡೆ ಮಾಡದೆ ರಾಜ್ಯ ಸರ್ಕಾರ ಬಾಕಿ ಉಳಿಸಿದೆ. ಈ ಬಗ್ಗೆ ಟ್ವೀಟ್ ಮಾಡಿದ ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

 “ಅಂಗನವಾಡಿ ಕೇಂದ್ರಗಳಿಗೆ ಬಾಡಿಗೆ ಕಟ್ಟಲೂ ಯೋಗ್ಯತೆ ಇಲ್ಲದ ಕಾಂಗ್ರೆಸ್ ಸರ್ಕಾರ, ಅಂಗನವಾಡಿ ಕಾರ್ಯಕರ್ತೆಯರು ಬಡ್ಡಿಗೆ ಸಾಲ ತಂದು ಕಟ್ಟಡದ ಬಾಡಿಗೆ ಕಟ್ಟುವ ಪರಿಸ್ಥಿತಿ ತಂದಿಟ್ಟಿದೆ. ಗ್ರಾಮೀಣ ಭಾಗದ ಬಡ ಕುಟುಂಬದ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳಿಗೆ ಅಂಗನವಾಡಿಯಲ್ಲಿ ಸಿಗುವ ಬಿಸಿಯೂಟ, ಪೌಷ್ಠಿಕ ಆಹಾರವೇ ಜೀವನಾಧಾರ” ಎಂದರು.

ಅಂಗನವಾಡಿ ಕೇಂದ್ರಗಳಿಗೆ ಬಾಡಿಗೆ ಕಟ್ಟಲೂ ಯೋಗ್ಯತೆ ಇಲ್ಲದ ಕಾಂಗ್ರೆಸ್ ಸರ್ಕಾರ, ಅಂಗನವಾಡಿ ಕಾರ್ಯಕರ್ತೆಯರು ಬಡ್ಡಿಗೆ ಸಾಲ ತಂದು ಕಟ್ಟಡದ ಬಾಡಿಗೆ ಕಟ್ಟುವ ಪರಿಸ್ಥಿತಿ ತಂದಿಟ್ಟಿದೆ.

ಗ್ರಾಮೀಣ ಭಾಗದ ಬಡ ಕುಟುಂಬದ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳಿಗೆ ಅಂಗನವಾಡಿಯಲ್ಲಿ ಸಿಗುವ ಬಿಸಿಯೂಟ, ಪೌಷ್ಠಿಕ ಆಹಾರವೇ ಜೀವನಾಧಾರ.

 “ಬಡವರ ಪಾಲಿನ ಆಸರೆಯಾದ ಅಂಗನವಾಡಿಗಳಿಗೆ ಬಾಡಿಗೆ ಕಟ್ಟಲೂ ಯೋಗ್ಯತೆ ಇಲ್ಲದ ನಿಮ್ಮ ಸರ್ಕಾರ ಇದ್ದರೆಷ್ಟು ಸತ್ತರೆಷ್ಟು ಸಿಎಂ ಸಿದ್ದರಾಮಯ್ಯನವರೇ” ಎಂದು ಅಶೋಕ್ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಟ್ಯಾಗ್ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular