Monday, April 21, 2025
Google search engine

Homeರಾಜ್ಯಜಿಲ್ಲೆಗೆ ಅನುದಾನ ತರುವಲ್ಲಿ  ನಳಿನ್ ಕುಮಾರ್ ಕಟೀಲ್ ವಿಫಲ: ಎನ್.ಎಸ್.ಯು.ಐ ಪ್ರತಿಭಟನೆ

ಜಿಲ್ಲೆಗೆ ಅನುದಾನ ತರುವಲ್ಲಿ  ನಳಿನ್ ಕುಮಾರ್ ಕಟೀಲ್ ವಿಫಲ: ಎನ್.ಎಸ್.ಯು.ಐ ಪ್ರತಿಭಟನೆ

ಮಂಗಳೂರು(ದಕ್ಷಿಣ ಕನ್ನಡ): ಸಂಸದ ನಳಿನ್ ಕುಮಾರ್ ಕಟೀಲು ಅವರು ಜಿಲ್ಲೆಗೆ ಸಮರ್ಪಕ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಎನ್.ಎಸ್.ಯು.ಐ. ಕಾರ್ಯಕರ್ತರು ಸಂಸದರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಗುರುವಾರ ನಡೆಯಿತು.

ಎನ್.ಎಸ್.ಯು.ಐ. ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಕಾರ್ಯಕರ್ತರು ಉರ್ವಾ ಬಳಿ ಸಂಸದ ನಳಿನ್ ಕುಮಾರ್ ಕಟೀಲು ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭ ಸ್ಥಳದಲ್ಲಿದ್ದ ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದರು.

ಬಿಜೆಪಿಗೆ ಧಿಕ್ಕಾರ ಕೂಗುತ್ತಾ ಸಂಸದರ ಮನೆಯೆದುರು ಜಮಾಯಿಸಿದ ಕಾರ್ಯಕರ್ತರನ್ನು ಪೊಲೀಸರು ಬ್ಯಾರಿಕೇಡ್ ಗಳನ್ನು ಬಳಸಿ ತಡೆದರು.

ಮುತ್ತಿಗೆ ಯತ್ನ ನಡೆಸಿದ ವೇಳೆ ಅಲ್ಲಿದ್ದ ಉರ್ವಾ ಠಾಣಾಧಿಕಾರಿ ಭಾರತಿ ತಡೆದಾಗ ಎನ್.ಎಸ್.ಯು.ಐ. ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು. ಬ್ಯಾರಿಕೇಡ್ ತಳ್ಳಿ ಮುತ್ತಿಗೆಗೆ ಮುಂದಾದಾಗ ಪೊಲೀಸರು ಎನ್.ಎಸ್.ಯು.ಐ. ಕಾರ್ಯಕರ್ತರನ್ನು ವಶಕ್ಕೆ ಪಡೆದರು.

RELATED ARTICLES
- Advertisment -
Google search engine

Most Popular