ಚಾಮರಾಜನಗರ: ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕನ್ನಡ ಮತ್ತು ಸಂಸೃತಿ ಇಲಾಖೆ ಹಾಗೂ ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಗಡಿನಾಡು ಕನ್ನಡ ಉತ್ಸವ ಕಾರ್ಯಕ್ರಮವನ್ನು ನಾಳೆ ಫೆ. ೧೦ ರಂದು ಸಂಜೆ ೫ ಗಂಟೆಗೆ ಮಲೆ ಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಬಯಲು ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ.
ಸಾಲೂರುಮಠದ ಶ್ರೀಗಳಾದ ಶಾಂತಮಲ್ಲಿಕಾರ್ಜುನ ಸ್ವಾಮಿ ಅವರು ದಿವ್ಯ ಸಾನಿಧ್ಯ ವಹಿಸುವರು. ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಹಿಂದುಳಿದ ವರ್ಗಗಳು ಹಾಗೂ ಕನ್ನಡ ಮತ್ತು ಸಂಸೃತಿ ಇಲಾಖೆ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರು ಗಡಿನಾಡು ಕನ್ನಡ ಸಂಗೀತೋತ್ಸವಕ್ಕೆ ಚಾಲನೆ ನೀಡುವರು. ಶಾಸಕರಾದ ಎಂ.ಆರ್. ಮಂಜುನಾಥ್ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಗೌರವ ಉಪಸ್ಥಿತಿ ವಹಿಸುವರು.
ಲೋಕಸಭಾ ಸದಸ್ಯ ವಿ. ಶ್ರೀನಿವಾಸ್ ಪ್ರಸಾದ್, ಶಾಸಕರು ಮತ್ತು ಮೈಸೂರು ಸೇಲ್ಸ್ಇಂಟರ್ ನ್ಯಾಷನಲ್ ಲಿಮಿಟೆಡ್ನ ಅಧ್ಯಕ್ಷರಾದ ಸಿ. ಪುಟ್ಟರಂಗಶೆಟ್ಟಿ, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಮರಿತಿಬ್ಬೇಗೌಡ, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಮಲೆ ಮಹದೇಶ್ವರಬೆಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ. ಅರ್ಚನಾ ಪ್ರಕಾಶ್ ಅವರು ಮುಖ್ಯ ಅಥಿತಿಗಳಾಗಿ ಪಾಲ್ಗೊಳ್ಳಲಿದ್ದಾರೆ. ೨೦೨೩ರ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಪ್ರೊ. ಗೋಪಾಲ್ ಜಗದೀಶ್ ಮತ್ತು ಸಾಹಿತ್ಯ ಕ್ಷೇತ್ರದ ಪ್ರೊ. ಸಿ. ನಾಗಣ್ಣ ಅವರನ್ನು ಸನ್ಮಾನಿಸಲಾಗುವುದು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಜಿ. ಸಂತೋಷ್ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಪ್ರಕಾಶ್ ಮತ್ತಿಹಳ್ಳಿ, ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರ ಕಾರ್ಯದರ್ಶಿಗಳಾದ ಸರಸ್ವತಿ, ಕನ್ನಡ ಮತ್ತು ಸಂಸೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಎಂ.ಡಿ. ಸುದರ್ಶನ್ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಾಮರಾಜನಗರ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್, ಇತರೆ ಪದಾಧಿಕಾರಿಗಳು ಪಾಲ್ಗೊಳ್ಳುವರು.
ಬೆಳಿಗ್ಗೆ ೬.೩೦ ಗಂಟೆಗೆ ಕನ್ನಡ ಜಾಗೃತಿ ಜಾಥಾ, ೯.೩೦ ಗಂಟೆಗೆ ಇಂಡಿಗನತ್ತ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ದತ್ತು ಪಡೆಯುವುದು, ಬೆಳಿಗ್ಗೆ ೧೧ ಗಂಟೆಗೆ ಸಿ.ಪಿ ಕೃಷ್ಣಕುಮಾರ್ ಅವರಿಂದ ಜಿಲ್ಲಾ ಮಟ್ಟದ ಕವಿಗೋಷ್ಠಿ, ಮಧ್ಯಾಹ್ನ ೧೨ ಗಂಟೆಗೆ ತಾಲೂಕು ಜನಪದ ಸಾಹಿತ್ಯ ಪರಿಷತ್ ಅಧ್ಯಕ್ಷರಿಂದ ಜನಪದ ಸಾಹಿತ್ಯದ ಬಗ್ಗೆ ಕವಿಗೋಷ್ಠಿ, ೧ ಗಂಟೆಗೆ ಯಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಿಂದ ಗಡಿನಾಡು ಬಗ್ಗೆ ಉಪನ್ಯಾಸ, ಸಂಜೆ ೪ ಗಂಟೆಗೆ ಕನ್ನಡ ಜನಪದ ಕಲಾ ಪ್ರಕಾರಗಳ ಮೆರವಣಿಗೆ ಹಾಗೂ ಸಾಂಸ್ಕೃತಿಕ ನಡಿಗೆ, ೫ ಗಂಟೆಗೆ ಗಡಿನಾಡು ಕನ್ನಡ ಉತ್ಸವದ ವೇದಿಕೆ ಕಾರ್ಯಕ್ರಮ ಮತ್ತು ೭ ಗಂಟೆಗೆ ಗಡಿನಾಡು ಕನ್ನಡ ಸಂಗೀತೋತ್ಸವ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.