Sunday, April 20, 2025
Google search engine

Homeರಾಜ್ಯಸುದ್ದಿಜಾಲಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ: ಫೆ. 17 ರಂದು ವಿಧಾನ ಸೌಧ ಮುತ್ತಿಗೆ

ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ: ಫೆ. 17 ರಂದು ವಿಧಾನ ಸೌಧ ಮುತ್ತಿಗೆ

ಬೆಂಗಳೂರು: ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದು ಸೇರಿದಂತೆ ಕೆಳಕಂಡ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆಬ್ರವರಿ ೧೭ ರಂದು ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅಂದು ರಾಜ್ಯದ ಮೂಲೆ ಮೂಲೆಗಳಿಂದ ಬೆಂಗಳೂರಿಗೆ ಆಗಮಿಸುವ ಸಾವಿರಾರು ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ.

ರೈತರ ಬೇಡಿಕೆಗಳು:
ರೈತರ ಸಾಲ ಸಂಪೂರ್ಣ ಮನ್ನಾ ಆಗಬೇಕು
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಯಾಗಬೇಕು
ಈಗ ಘೋಷಿಸಿರುವ ಭತ್ತ, ರಾಗಿ, ಜೋಳ ಮತ್ತಿತರ ಧಾನ್ಯಗಳ ಬೆಂಬಲ ಬೆಲೆಯನ್ನು ಕ್ವಿಂಟಾಲ್‌ಗೆ ೫೦೦ ರೂ ಹೆಚ್ಚಳ ಮಾಡಬೇಕು.
೬೦ ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿಗೆ ತರಬೇಕು.
ರೈತರ ಹಕ್ಕೂತ್ತಾಯಗಳ ಈಡೇರಿಸಬೇಕು ಇಲ್ಲದಿದ್ದರೆ ಮುಂದಿನ ಲೋಕಸಭಾ ಚುನಾವಣೆ ರೈತರ ಪಾಲಿಗೆ ಕರಾಳ ಚುನಾವಣೆಯಾಗುತ್ತದೆ ಎಂದು ಎಚ್ಚರಿಸಿದರು
ನಾಲ್ಕು ಕಾರ್ಮಿಕ ಸಂಹಿತೆಗಳ ರದ್ದತಿ, ಮೂಲಭೂತ ಹಕ್ಕಾಗಿ ಖಾತರಿಪಡಿಸಿದ ಉದ್ಯೋಗ,
ಸಾರ್ವಜನಿಕ ವಲಯದ ಉದ್ಯಮಗಳ (ಪಿಎಸ್‌ಯು) ಖಾಸಗೀಕರಣಕ್ಕೆ ವಿರೋಧ ಮತ್ತು ಉದ್ಯೋಗಿಗಳ ಸಂದರ್ಭೋಚಿತಗೊಳಿಸುವಿಕೆ ಮತ್ತು ಸ್ಥಿರ-ಅವಧಿಯ ಉದ್ಯೋಗವನ್ನು ರದ್ದುಗೊಳಿಸುವುದು
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಬಲಪಡಿಸುವುದು,
ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವುದು, ಔಪಚಾರಿಕ ಮತ್ತು ಅನೌಪಚಾರಿಕ ವಲಯಗಳಲ್ಲಿ ಎಲ್ಲರಿಗೂ ಪಿಂಚಣಿ ಮತ್ತು ಸಾಮಾಜಿಕ ಭದ್ರತೆಯನ್ನು ನೀಡುವುದು
ಶೀಘ್ರದಲ್ಲಿಯೇ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಬೇಕು. ಕಳಸಾಬಂಡೂರಿ, ಮಹದಾಯಿ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು.
೧೯೬೨ ರಲ್ಲಿ ದಿ.ನಿಜಲಿಂಗಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಬಡಪೀಡಿತ ಪ್ರದೇಶಗಳಾದ ಲಕ್ಯ ಹೋಬಳಿ, ಸಖರಾಯ ಪಟ್ಟಣ ಹೋಬಳಿ, ದೇವನೂರು ಹೋಬಳಿ, ಕಡೂರು ತಾಲ್ಲೂಕು ಮುಂತಾದ ಗ್ರಾಮಗಳ ಸಾವಿರಾರು ಎಕರೆ ಜಮೀನಿಗೆ ನೀರು ಒದಗಿಸಲು ಕಣಿವೆದಾಸರಹಳ್ಳಿ ಬಳಿ ನಿರ್ಮಾಣ ಮಾಡಲು ಉದ್ದೇಶಿಸಿದ್ದ ಅಣೆಕಟ್ಟೆಯನ್ನು ಮುಚ್ಚಿಹಾಕಲಾಗಿದ್ದು, ಸದರಿ ಸರ್ಕಾರ ಈ ಅಣೆಕಟ್ಟೆಯನ್ನು ರೈತರಿಗೆ ಅನುಕೂಲಕರವಾಗುವ ರೀತಿಯಲ್ಲಿ ಮರು ಸ್ಥಾಪಿಸಬೇಕು.

ಸುದ್ದಿಗೋಷ್ಠಿಯಲ್ಲಿ ದಯಾನಂದ ಪಾಟೀಲ್ ರಾಜ್ಯ ಗೌರವಾಧ್ಯಕ್ಷರು ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಗುಲಬರ್ಗಾ ಚಂದ್ರಶೇಖರ ಭೋವಿ, ರಾಜ್ಯ ಯುವ ಘಟಕದ ಅಧ್ಯಕ್ಷರು ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ಚಿಕ್ಕಮಗಳೂರು ಇಂಗಲಗುಪ್ಪೆ ಕೃಷ್ಣೇಗೌಡ, ರಾಜ್ಯ ವರಿಷ್ಠ ನಾಯಕರು, ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಟಿ.ಆರ್.ಕೃಷ್ಣ, ರೈತ ಚಳವಳಿ ಬೆಂಗಳೂರು ನಗರಾಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಇದ್ದರು.

RELATED ARTICLES
- Advertisment -
Google search engine

Most Popular