Saturday, April 19, 2025
Google search engine

Homeರಾಜಕೀಯಇದು ಡಿಪಿಆರ್ ಬಜೆಟ್!;  ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ

ಇದು ಡಿಪಿಆರ್ ಬಜೆಟ್!;  ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ

ಬಿಜೆಪಿ ಬಜೆಟ್ ವೇಳೆ ಸಿದ್ದರಾಮಯ್ಯ ಕಿವಿಗೆ ಹೂವು ಇಟ್ಟುಕೊಂಡಿದ್ದರು; ಈಗ 7 ಕೋಟಿ ಕನ್ನಡಿಗರ ಕಿವಿಗೆ ಹೂವು ಇಟ್ಟಿದ್ದಾರೆ!!

ಬೆಂಗಳೂರು: ಇದು ಡಿಪಿಆರ್ ಬಜೆಟ್! ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೊಟ್ಟ ಪ್ರತಿಕ್ರಿಯೆ ಇದು.

ಪ್ರಸಕ್ತ ಸಾಲಿನ ಆಯವ್ಯಯದ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ಸರಕಾರದಿಂದ ಯವುದಾದರೂ ಯೋಜನೆ ಜಾರಿ ಮಾಡುವ ಮುನ್ನ ಸಮಗ್ರ ಯೋಜನಾ ವರದಿ (DPR) ಅಂತ ಮಾಡುತ್ತಾರೆ. ಆ DPR ಆದ ಮೇಲೆ ಏನೆಲ್ಲಾ ಆಗುತ್ತದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ಬಜೆಟ್ ಕೂಡ ಹಾಗೆಯೇ ಇದೆ ಎಂದರು.

ಈ ಬಜೆಟ್ ಅನ್ನು ನೋಡಿದರೆ ಇದು ನಾಳೆ ಬಾ ಸರಕಾರದಂತೆ ಇದೆ ಎಂದು ಅವರು ಟೀಕಿಸಿದರು.

ಬಜೆಟ್ ಓದುವಾಗಲೇ ನನಗೆ ಅನಿಸಿದ್ದು ಅವರಲ್ಲಿ ವಿಶ್ವಾಸದ ಕೊರತೆ ಎದ್ದು ಕಾಣುತ್ತಿದೆ. ಅವರು ಗ್ಯಾರಂಟಿಯ ಗುಂಗಿನಿಂದ ಇನ್ನೂ ಹೊರಗೇ ಗೆ ಬಂದಿಲ್ಲ. 10 ತಿಂಗಳು ಕಳೆದರೂ ಇನ್ನೂ ಗ್ಯಾರಂಟಿಗಳ ಬಗ್ಗೆಯೇ ಕನವರಿಕೆ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.

ವಿಶ್ವಾಸ ಮೂಡುತ್ತಿಲ್ಲ:

ಸಿದ್ದರಾಮಯ್ಯ ಅವರ 15ನೇ ಬಜೆಟ್ ಇದು. ರಾಜ್ಯದ ಇತಿಹಾಸದಲ್ಲಿ 15 ಬಜೆಟ್ ಗಳನ್ನು ಮಂಡಿಸುವವರು ಮುಂದೆ ಬರುತ್ತಾರೋ ಇಲ್ಲವೋ ಗೊತ್ತಿಲ್ಲ. ಸಿದ್ದರಾಮಯ್ಯ ಅವರಿಗೆ ಆಡಳಿತದಲ್ಲಿ ಸಾಕಷ್ಟು ಅನುಭವ ಇದೆ. ಆದರೆ, ಬಜೆಟ್ ನೋಡಿದರೆ ಯಾವುದೇ ರೀತಿಯ ವಿಶ್ವಾಸ ಮೂಡುತ್ತಿಲ್ಲ ಈ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು. 

ಬಜೆಟ್ ಮೂಲಕ ರಾಜ್ಯದ ವಿನಾಶಕ್ಕೆ ಬುನಾದಿ:

ಸರಕಾರದ ಖಜಾನೆ ಖಾಲಿ ಆಗಿದೆ ಅಂತ ನಾವು ಹೇಳಲ್ಲ. ಜನರು ಸಮೃದ್ದಿಯಾಗಿ ಖಜಾನೆ ತುಂಬಿಸಿದ್ದಾರೆ. ಈ ಬಜೆಟ್ ನೋಡಿದರೆ ಜನರು ನಾವು ಎಷ್ಟು ತಪ್ಪು ಮಾಡಿದ್ದೇವೆ ಇವರನ್ನು ಗೆಲ್ಲಿಸಿ ಎಂದು ಜನ ಅಂದುಕೊಂಡಿದ್ದಾರೆ. ಕೇಂದ್ರ ಸರಕಾರ ಅಮೃತಕಾಲ ಅಂದರೆ ಸಿದ್ದರಾಮಯ್ಯ ಅವರು ವಿನಾಶಕಾಲ ಎಂದು ಹೇಳಿದರು. ಇವತ್ತಿನ ಸಿಎಂ ಬಜೆಟ್ ರಾಜ್ಯದ ವಿನಾಶಕಾಲಕ್ಕೆ ಬುನಾದಿ ಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದರು.

ಏಳು ಕೋಟಿ ಜನರ ಕಿವಿಗೆ ಹೂವು:

ಹಿಂದಿನ ಬಿಜೆಪಿ ಸರ್ಕಾರ ಬಜೆಟ್ ಮಂಡನೆ ಮಾಡಿದ್ದಾಗ ಸದನಕ್ಕೆ ಬರುವಾಗ ಕಿವಿಗೆ ಹೂವು ಇಟ್ಟುಕೊಂಡು ಸಿದ್ದರಾಮಯ್ಯ ಬಂದಿದ್ದರು. ಈಗ ಅದೇ ಹೂವನ್ನ 7 ಕೋಟಿ ಜನರ ಕಿವಿಗೆ ಇಟ್ಟಿದ್ದಾರೆ. ಈ ಬಜೆಟ್ ನೋಡಿದರೆ ‘ನಾಳೆ ಬಾ ಸರಕಾರ ‘ ದಂತೆ ಕಾಣುತ್ತಿದೆ ಎಂದು ಅವರು ಕಿಡಿಕಾರಿದರು.

ಕೇಂದ್ರ ಸರಕಾರಕ್ಕೆ ಅವರು ನಿತ್ಯವೂ ಬೈತಾರೆ. ಆದರೆ ಅದೇ ಕೇಂದ್ರಕ್ಕೆ ಮನವಿ ಮಾಡುತ್ತೇವೆ ಅನ್ನುತ್ತಾರೆ. ಬಜೆಟ್ ಪುಸ್ತಕದ ಪ್ರತಿ ಪುಟದಲ್ಲಿಯೂ ಕೇಂದ್ರ ಸರಕಾರವನ್ನು  ಬೈದಿದ್ದಾರೆ. ಒಂದು ಸುಳ್ಳನ್ನು ಸತ್ಯ ಮಾಡಬೇಕಾದಾರೆ ನೂರು ಬಾರಿ ಸುಳ್ಳು ಹೇಳು ಎನ್ನುವ ಮಾತಿದೆ. ಅದೇ ಕೆಲಸವನ್ನು ಈಗ ಸಿದ್ದರಾಮಯ್ಯ ಅವರು ಮಾಡಿದ್ದಾರೆ. ಇಂತಹ ಕೆಟ್ಟ ಸರಕಾರ ಈ ದೇಶದಲ್ಲಿ ಯಾವತ್ತೂ ಬಂದಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಜನರ ಮೇಲೆ ಸಿಎಂಗೆ ಸಿಟ್ಟಿದೆ, ಬಜೆಟ್ ನಲ್ಲಿ ಅದು ಕಾಣುತ್ತಿದೆ:

ನಾಡಿನ ಜನರ ಮೇಲೆ ಸಿದ್ದರಾಮಯ್ಯಗೆ ಆಕ್ರೋಶ ಇದ್ದಂತೆ ಇದೆ. ಆ ಸಿಟ್ಟನ್ನು ಬಜೆಟ್‌ನಲ್ಲಿ ತೋರಿಸಿದ್ದಾರೆ. ಇಷ್ಟೇ ಈ ಬಜೆಟ್ ನ ಸಾರಾಂಶ. ಅಷ್ಟೇ ಅಲ್ಲದೆ, ಸಿದ್ದರಾಮಯ್ಯಗೆ ಜೆಡಿಎಸ್, ಬಿಜೆಪಿ, ಕೇಂದ್ರದ ಮೇಲೆ ಇಷ್ಟು ದಿನ ಆಕ್ರೋಶ ಇತ್ತು ಅಂತ ಅಂದುಕೊಂಡಿದ್ದೆ. ಆದರೆ ಈ ಬಜೆಟ್ ನೋಡಿದರೆ ಸಿದ್ದರಾಮಯ್ಯ ಅವರಿಗೆ 7 ಕೋಟಿ ಕನ್ನಡಿಗರ ಮೇಲೆ ಆಕ್ರೋಶ ಇದೆ ಅಂತ ಅರ್ಥವಾಗುತ್ತದೆ ಎಂದರು ಕುಮಾರಸ್ವಾಮಿ ಅವರು.

RELATED ARTICLES
- Advertisment -
Google search engine

Most Popular