Wednesday, April 23, 2025
Google search engine

Homeರಾಜ್ಯಪಾಕಿಸ್ತಾನ ಪರ ಘೋಷಣೆ ಆರೋಪ ಸಾಬೀತಾದರೆ ಕಠಿಣ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಪಾಕಿಸ್ತಾನ ಪರ ಘೋಷಣೆ ಆರೋಪ ಸಾಬೀತಾದರೆ ಕಠಿಣ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ವಿಚಾರದಲ್ಲಿ ಎಫ್ ಎಸ್ ಎಲ್ ವರದಿ ಬರುವ ಮುನ್ನವೇ ಬಿಜೆಪಿಯವರು ಅಪರಾಧ ನಿರ್ಣಯಕ್ಕೆ ಬಂದಿದ್ದಾರೆ. ಬಿಜೆಪಿ ಯವರಿಗೆ ಇಷ್ಟೊಂದು ಆತುರವೇಕೆ.? ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಅವರು, ಇಲ್ಲಿ ಘೋಷಣೆ ವಿಚಾರದಲ್ಲಿ ಸ್ವಲ್ಪ ಗೊಂದಲವಿದೆ. ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು ನಿಜವಾದರೆ ಅಂತಹ ದೇಶದ್ರೋಹಿಗಳಿಗೆ ಕಲಿಸದೇ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಅದು ‘ನಾಸೀರ್ ಸಾಬ್ ಝಿಂದಾಬಾದೋ? ಅಥವಾ ಪಾಕಿಸ್ತಾನ್ ಝಿಂದಾಬಾದ್’ ಘೋಷಣೆಯೋ ಎಂಬುದು ತಿಳಿಯಬೇಕು. ಎಫ್ ಎಸ್ ಎಲ್ ವರದಿ ಬಂದ ನಂತರ ಅದು ಸ್ಪಷ್ಟವಾಗಲಿದೆ. ಅಲ್ಲಿಯವರೆಗೂ ಕಾಯಲು ತಾಳ್ಮೆ ಇಲ್ಲವೆಂದರೆ ಹೇಗೆ.? ಎಂದು ಪ್ರಶ್ನಿಸಿದ್ದಾರೆ.

RELATED ARTICLES
- Advertisment -
Google search engine

Most Popular