ನವದೆಹಲಿ: ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-೭೪೮ಎ ಬೆಳಗಾವಿ-ಹುನಗುಂದ-ರಾಯಚೂರು ವಿಭಾಗದ ಚತುಷ್ಪಥ ರಸ್ತೆಯಾಗಿ ಉನ್ನತೀಕರಿಸಲು ಹೆದ್ದಾರಿ ಸಚಿವಾಲಯ ೨,೬೭೫.೩೧ ಕೋಟಿ ರೂ. ಮಂಜೂರು ಮಾಡಿದೆ. ಈ ಉಪಕ್ರಮವು ಒಟ್ಟು ೯೨.೪೦ ಕಿಮೀ ಉದ್ದದ ಹೆದ್ದಾರಿಯನ್ನು ಒಳಗೊಂಡಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ಯೋಜನೆಯು ಪಣಜಿ-ಹೈದರಾಬಾದ್ EC10 ಕಾರಿಡಾರ್ನ ಅವಿಭಾಜ್ಯ ಅಂಗವಾಗಿದೆ ಎಂದು ಅವರು ಹೇಳಿದ್ದಾರೆ.
ಮೀನುಗಾರಿಕೆ ಮತ್ತು ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿರುವ ಪಣಜಿ, ಆಹಾರ ಧಾನ್ಯಗಳು ಮತ್ತು ಹಾಲಿನ ಉತ್ಪನ್ನಗಳಿಗೆ ಹೆಸರುವಾಸಿಯಾಗಿರುವ ಬೆಳಗಾವಿ; ಅಕ್ಕಿ, ಹತ್ತಿ, ಶೇಂಗಾ, ಮತ್ತು ಬೇಳೆಕಾಳುಗಳಿಗೆ ಹೆಸರುವಾಸಿಯಾಗಿರುವ ರಾಯಚೂರು ಮತ್ತು ಐಟಿ, ಫಾರ್ಮ್ ಮತ್ತು ಹೆಲ್ತ್ಕೇರ್ಗೆ ವಿಶಿಷ್ಟ ಸ್ಥಾನ ಪಡೆದಿರುವ ಹೈದರಾಬಾದ್ ಸೇರಿದಂತೆ ಪ್ರಮುಖ ಕೈಗಾರಿಕಾ ಕೇಂದ್ರಗಳನ್ನು ಸಂಪರ್ಕಿಸುತ್ತದೆ.