ಮಂಡ್ಯ: ಕುರಿಗಾಹಿಗಳ ಮೇಲೆ ಚಿರತೆ ದಾಳಿ ಮಾಡಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ತಾಲ್ಲೂಕಿನ ಕಿರಗಂದೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಜಮೀನೊಂದರಲ್ಲಿ ಕುರಿಗಾಹಿಗಳು ಕುರಿ ಮಂದೆ ಹಾಕಿಕೊಂಡಿದ್ದರು. ಕುರಿ, ಮೇಕೆ ಮೇಲೆ ದಾಳಿ ಮಾಡುವ ವೇಳೆ ಕುರಿಗಾಹಿಗಳ ಮೇಲೆ ಚಿರತೆ ದಾಳಿ ನಡೆಸಿದೆ.
ಚಿರತೆ ದಾಳಿಯಿಂದಾಗಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಮತ್ತೊಬ್ಬ ಚಿರತೆ ದಾಳಿಯಿಂದ ಬಚಾವ್ ಆಗಿದ್ದಾನೆ.
ಗಾಯಗೊಂಡ ಕುರಿಗಾಹಿಯನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಚಿಕಿತ್ಸೆ ಗೆ ದಾಖಲಿಸಲಾಗಿದೆ.
ತಕ್ಷಣವೇ ಚಿರತೆ ಸೆರೆಹಿಡಿಯುವಂತೆ ಗ್ರಾಮಸ್ಥರು ಅರಣ್ಯಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.