Monday, April 21, 2025
Google search engine

Homeರಾಜ್ಯ60% ಕನ್ನಡ ಫಲಕ ಇಲ್ಲವೆಂದು ಮಳಿಗೆ ಮುಚ್ಚಬೇಡಿ : ಹೈಕೋರ್ಟ್ ಆದೇಶ

60% ಕನ್ನಡ ಫಲಕ ಇಲ್ಲವೆಂದು ಮಳಿಗೆ ಮುಚ್ಚಬೇಡಿ : ಹೈಕೋರ್ಟ್ ಆದೇಶ

ಬೆಂಗಳೂರು: ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ಬೋರ್ಡ್ ಕಡ್ಡಾಯ ಹಾಕಬೇಕು ಎಂಬ ಕೂಗು ಜೋರಾಗಿಯೇ ಇದೆ. ಶೇ.೬೦ ರಷ್ಟು ಕನ್ನಡ ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳ ವಿರುದ್ದ ಬಿಬಿಎಂಪಿ ಕ್ರಮಕೈಗೊಳ್ಳುತ್ತಿದೆ. ಈ ಬೆನ್ನಲ್ಲೇ ಇದೀಗ ಬಲವಂತದ ಕ್ರಮ ಜರುಗಿಸಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮ ಪ್ರಕಾರ, ನಾಮಫಲಕದಲ್ಲಿ ಕನ್ನಡ ಬಳಸದಿರುವ ಮಳಿಗೆಗಳನ್ನು ಬಂದ್ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಈ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ತಕರಾರರು ಅರ್ಜಿ ಸಲ್ಲಿಕೆಯಾಗಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ನಾಮಫಲಕಗಳಲ್ಲಿ ಶೇ.೬೦ರಷ್ಟು ಕನ್ನಡ ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳನ್ನು ಮುಚ್ಚುವು ದಾಗಿ (ಸೀಲ್ಡ್ ಡೌನ್) ತಿಳಿಸಿರುವುದು ಕಠಿಣ ಕ್ರಮವಾಗಲಿದೆ. ದಂಡ ಹಾಕುವ ಅಥವಾ ಪರವಾನಗಿ ರದ್ದುಪಡಿಸುವ ಕ್ರಮವಾದರೆ ಯೋಚಿಸಬಹುದು. ಆದರೆ, ಸಂಸ್ಥೆಯನ್ನೇ ಮುಚ್ಚುವುದು ಸರಿಯಾದ ಕ್ರಮವಲ್ಲ. ಮೇಲಾಗಿ ಕಾಯ್ದೆ ಮೂಲಕ ನಿಯಮಗಳನ್ನು ಸುತ್ತೋಲೆ ರೂಪದಲ್ಲಿ ಜಾರಿಗೊಳಿಸಲು ಸಾಧ್ಯವಿಲ್ಲ. ಆದ್ದರಿಂದ ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡ ನ್ನಡ ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳನ್ನು ಸೀಲ್ ಡೌನ್ ಮಾಡುವಂತಹ ಬಲವಂತದ ಕ್ರಮ ಜರುಗಿಸಬಾರದು. ಉಳಿದಂತೆ ಸುತ್ತೋಲೆ ಉಲ್ಲೇಖಿಸಿರುವ ಇತರೆ ಅಂಶಗಳು ಅರ್ಜಿ ಕುರಿತ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಮಧ್ಯಂತರ ಆದೇಶ ಮಾಡಿತು.

RELATED ARTICLES
- Advertisment -
Google search engine

Most Popular